ಜಿಲ್ಲೆಗಳು

ವಿದೇಶಿ ಪ್ರತಿನಿಧಿಗಳಿಂದ ಪಾಲಿಕೆ ಆಡಳಿತ ಅಧ್ಯಯನ

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಆಡಳಿತ ಹಾಗೂ ಕಾರ್ಯವೈಖರಿ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಶುಕ್ರವಾರ ವಿವಿಧ ರಾಷ್ಟ್ರಗಳ ೨೨ ಮಂದಿ ಅಧಿಕಾರಿಗಳು ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಶುಕ್ರವಾರ ಬೆಳಿಗ್ಗೆ ನಗರಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಉಪ ಮಹಾಪೌರರಾದ ಡಾ.ಜಿ.ರೂಪ ಅವರು ಸೌತ್ ಸುಡಾನ್, ಉಗಾಂಡಾ, ತಜಕಿಸ್ತಾನ್, ತಾಂಜೇನಿಯಾ, ಕೀನ್ಯಾ ಹಾಗೂ ಶ್ರೀಲಂಕಾ ಮುಂತಾದ ದೇಶಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಅಧಿಕಾರಿಗಳನ್ನು ಸ್ವಾಗತಿಸಿದರು.

ಮೈಸೂರು ಸಾಂಸ್ಕೃತಿಕ ಹಾಗೂ ಪಾರಂಪರಿಕ ನಗರ. ಸ್ವಚ್ಛತೆುಂಲ್ಲಿ ದೇಶದಲ್ಲಿಯೇ ಮೊದಲ ನಗರ ಎಂಬ ಬಿರುದನ್ನು ಪಡೆದಿದೆ. ಮೈಸೂರನ್ನು ಆಳಿದ ಮಹಾರಾಜರ ಕೊಡುಗೆ ಸಾಕಾಷ್ಟಿದೆ. ಇಲ್ಲಿನ ಅರಮನೆಗಳು, ಆಹಾರ ಪದ್ಧತಿ ಸಾಕಷ್ಟು ಮಂದಿಯನ್ನು ಸೆಳೆದಿದೆ ಎಂಬಿತ್ಯಾದಿ ವಿಷಯಗಳನ್ನು ಗಣ್ಯರಿಗೆ ವಿವರಿಸಿದರು.

ನಗರಪಾಲಿಕೆಯ ಆಡಳಿತದ ಬಗ್ಗೆ ವಿವರಿಸಿದ ಹೆಚ್ಚುವರಿ ಆಯುಕ್ತರಾದ ಸವಿತಾ ಅವರು, ಮೈಸೂರು ಸ್ವಚ್ಛತೆಯಲ್ಲಿ ಈ ಬಾರಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಮೈಸೂರು ೬೫ ವಾರ್ಡ್‌ಗಳನ್ನು ಹೊಂದಿದ್ದು, ಜನಪ್ರತಿನಿಧಿಗಳ ಸಹಕಾರ ಇನ್ನಿತರೆ ವಿಚಾರಗಳನ್ನು ತಿಳಿಸಿದರು.

ಪರಿಸರ ಇಂಜಿನಿುಂರ್ ಮೈತ್ರಿ ಅವರು ಮೈಸೂರಿನ ೬೫ ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ತಾಜ್ಯವನ್ನು ಹೇಗೆ ಸಮರ್ಥವಾಗಿ ವಿಲೇವಾರಿ ಮಾಡಲಾಗುತ್ತಿದೆ. ಪ್ರತಿದಿನ ಎಷ್ಟು ತಾಜ್ಯ ಉತ್ಪತ್ತಿಯಾಗುತ್ತಿದೆ. ಪೌರಕಾರ್ಮಿಕರ ಪಾತ್ರವೇನು? ಎಂಬುದನ್ನು ಪ್ರಾತ್ಯಕ್ಷಿಕೆಯ ಸಮೇತ ವಿವರಿಸಿದರು.

ಕಂದಾಯ ಅಧಿಕಾರಿ ದಾಸೇಗೌಡ ಅವರು, ಮೈಸೂರು ನಗರದಾದ್ಯಂತ ಆಸ್ತಿ ತೆರಿಗೆುಂನ್ನು ಸಂಗ್ರಹಿಸುವ ಬಗೆ, ಕಂದಾಯ ನಿಗದಿಗೆ ಮಾನದಂಡ, ಆನ್‌ಲೈನ್ ಮೂಲಕ ಕಂದಾಯ ಪಾವತಿಸಿಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದರು.

ನಗರಪಾಲಿಕೆಗೆ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ನಗರಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಕೆ ಮಾಡಲಾಗಿದೆ. ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಉಳಿತಾಯವಾಗಿದೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.

ಸಭೆಯಲ್ಲಿ ಹಾಜರಿದ್ದ ವಿವಿಧ ದೇಶಗಳ ಪ್ರತಿನಿಧಿಗಳು, ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿ ಬಗ್ಗೆ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಅನುವಾನಗಳನ್ನು ಪರಿಹರಿಸಿಕೊಂಡರು. ನಂತರ ಅರಮನೆ ಹಾಗೂ ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್ಸಾದರು. ಹೆಚ್ಚುವರಿ ಆಯುಕ್ತ ಜಿ.ಸೋಮಶೇಖರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಹೈದರಾಬಾದ್‌ನಲ್ಲಿರುವ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರತಿವರ್ಷ ವಿವಿಧ ದೇಶಗಳ ಪ್ರತಿನಿಧಿಗಳನ್ನು ಭಾರತಕ್ಕೆ ಆಹ್ವಾನಿಸಿ ಇಲ್ಲಿನ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡುತ್ತದೆ. ಅದರಂತೆ ಈ ಬಾರಿ ೨೨ ಮಂದಿ ರಾಷ್ಟ್ರಮಟ್ಟದ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದ್ದು, ಪ್ರತಿನಿಧಿಗಳು ಮೈಸೂರು, ಬೆಂಗಳೂರು, ರಾಮನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago