ಜಿಲ್ಲೆಗಳು

ವಿದೇಶಿ ಪ್ರತಿನಿಧಿಗಳಿಂದ ಪಾಲಿಕೆ ಆಡಳಿತ ಅಧ್ಯಯನ

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಆಡಳಿತ ಹಾಗೂ ಕಾರ್ಯವೈಖರಿ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಶುಕ್ರವಾರ ವಿವಿಧ ರಾಷ್ಟ್ರಗಳ ೨೨ ಮಂದಿ ಅಧಿಕಾರಿಗಳು ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಶುಕ್ರವಾರ ಬೆಳಿಗ್ಗೆ ನಗರಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಉಪ ಮಹಾಪೌರರಾದ ಡಾ.ಜಿ.ರೂಪ ಅವರು ಸೌತ್ ಸುಡಾನ್, ಉಗಾಂಡಾ, ತಜಕಿಸ್ತಾನ್, ತಾಂಜೇನಿಯಾ, ಕೀನ್ಯಾ ಹಾಗೂ ಶ್ರೀಲಂಕಾ ಮುಂತಾದ ದೇಶಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಅಧಿಕಾರಿಗಳನ್ನು ಸ್ವಾಗತಿಸಿದರು.

ಮೈಸೂರು ಸಾಂಸ್ಕೃತಿಕ ಹಾಗೂ ಪಾರಂಪರಿಕ ನಗರ. ಸ್ವಚ್ಛತೆುಂಲ್ಲಿ ದೇಶದಲ್ಲಿಯೇ ಮೊದಲ ನಗರ ಎಂಬ ಬಿರುದನ್ನು ಪಡೆದಿದೆ. ಮೈಸೂರನ್ನು ಆಳಿದ ಮಹಾರಾಜರ ಕೊಡುಗೆ ಸಾಕಾಷ್ಟಿದೆ. ಇಲ್ಲಿನ ಅರಮನೆಗಳು, ಆಹಾರ ಪದ್ಧತಿ ಸಾಕಷ್ಟು ಮಂದಿಯನ್ನು ಸೆಳೆದಿದೆ ಎಂಬಿತ್ಯಾದಿ ವಿಷಯಗಳನ್ನು ಗಣ್ಯರಿಗೆ ವಿವರಿಸಿದರು.

ನಗರಪಾಲಿಕೆಯ ಆಡಳಿತದ ಬಗ್ಗೆ ವಿವರಿಸಿದ ಹೆಚ್ಚುವರಿ ಆಯುಕ್ತರಾದ ಸವಿತಾ ಅವರು, ಮೈಸೂರು ಸ್ವಚ್ಛತೆಯಲ್ಲಿ ಈ ಬಾರಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಮೈಸೂರು ೬೫ ವಾರ್ಡ್‌ಗಳನ್ನು ಹೊಂದಿದ್ದು, ಜನಪ್ರತಿನಿಧಿಗಳ ಸಹಕಾರ ಇನ್ನಿತರೆ ವಿಚಾರಗಳನ್ನು ತಿಳಿಸಿದರು.

ಪರಿಸರ ಇಂಜಿನಿುಂರ್ ಮೈತ್ರಿ ಅವರು ಮೈಸೂರಿನ ೬೫ ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ತಾಜ್ಯವನ್ನು ಹೇಗೆ ಸಮರ್ಥವಾಗಿ ವಿಲೇವಾರಿ ಮಾಡಲಾಗುತ್ತಿದೆ. ಪ್ರತಿದಿನ ಎಷ್ಟು ತಾಜ್ಯ ಉತ್ಪತ್ತಿಯಾಗುತ್ತಿದೆ. ಪೌರಕಾರ್ಮಿಕರ ಪಾತ್ರವೇನು? ಎಂಬುದನ್ನು ಪ್ರಾತ್ಯಕ್ಷಿಕೆಯ ಸಮೇತ ವಿವರಿಸಿದರು.

ಕಂದಾಯ ಅಧಿಕಾರಿ ದಾಸೇಗೌಡ ಅವರು, ಮೈಸೂರು ನಗರದಾದ್ಯಂತ ಆಸ್ತಿ ತೆರಿಗೆುಂನ್ನು ಸಂಗ್ರಹಿಸುವ ಬಗೆ, ಕಂದಾಯ ನಿಗದಿಗೆ ಮಾನದಂಡ, ಆನ್‌ಲೈನ್ ಮೂಲಕ ಕಂದಾಯ ಪಾವತಿಸಿಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದರು.

ನಗರಪಾಲಿಕೆಗೆ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ನಗರಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಕೆ ಮಾಡಲಾಗಿದೆ. ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಉಳಿತಾಯವಾಗಿದೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.

ಸಭೆಯಲ್ಲಿ ಹಾಜರಿದ್ದ ವಿವಿಧ ದೇಶಗಳ ಪ್ರತಿನಿಧಿಗಳು, ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿ ಬಗ್ಗೆ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಅನುವಾನಗಳನ್ನು ಪರಿಹರಿಸಿಕೊಂಡರು. ನಂತರ ಅರಮನೆ ಹಾಗೂ ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್ಸಾದರು. ಹೆಚ್ಚುವರಿ ಆಯುಕ್ತ ಜಿ.ಸೋಮಶೇಖರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಹೈದರಾಬಾದ್‌ನಲ್ಲಿರುವ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರತಿವರ್ಷ ವಿವಿಧ ದೇಶಗಳ ಪ್ರತಿನಿಧಿಗಳನ್ನು ಭಾರತಕ್ಕೆ ಆಹ್ವಾನಿಸಿ ಇಲ್ಲಿನ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡುತ್ತದೆ. ಅದರಂತೆ ಈ ಬಾರಿ ೨೨ ಮಂದಿ ರಾಷ್ಟ್ರಮಟ್ಟದ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದ್ದು, ಪ್ರತಿನಿಧಿಗಳು ಮೈಸೂರು, ಬೆಂಗಳೂರು, ರಾಮನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago