ಜಿಲ್ಲೆಗಳು

ವಿದೇಶಿ ಪ್ರತಿನಿಧಿಗಳಿಂದ ಪಾಲಿಕೆ ಆಡಳಿತ ಅಧ್ಯಯನ

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಆಡಳಿತ ಹಾಗೂ ಕಾರ್ಯವೈಖರಿ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಶುಕ್ರವಾರ ವಿವಿಧ ರಾಷ್ಟ್ರಗಳ ೨೨ ಮಂದಿ ಅಧಿಕಾರಿಗಳು ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಶುಕ್ರವಾರ ಬೆಳಿಗ್ಗೆ ನಗರಪಾಲಿಕೆಯ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಉಪ ಮಹಾಪೌರರಾದ ಡಾ.ಜಿ.ರೂಪ ಅವರು ಸೌತ್ ಸುಡಾನ್, ಉಗಾಂಡಾ, ತಜಕಿಸ್ತಾನ್, ತಾಂಜೇನಿಯಾ, ಕೀನ್ಯಾ ಹಾಗೂ ಶ್ರೀಲಂಕಾ ಮುಂತಾದ ದೇಶಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಅಧಿಕಾರಿಗಳನ್ನು ಸ್ವಾಗತಿಸಿದರು.

ಮೈಸೂರು ಸಾಂಸ್ಕೃತಿಕ ಹಾಗೂ ಪಾರಂಪರಿಕ ನಗರ. ಸ್ವಚ್ಛತೆುಂಲ್ಲಿ ದೇಶದಲ್ಲಿಯೇ ಮೊದಲ ನಗರ ಎಂಬ ಬಿರುದನ್ನು ಪಡೆದಿದೆ. ಮೈಸೂರನ್ನು ಆಳಿದ ಮಹಾರಾಜರ ಕೊಡುಗೆ ಸಾಕಾಷ್ಟಿದೆ. ಇಲ್ಲಿನ ಅರಮನೆಗಳು, ಆಹಾರ ಪದ್ಧತಿ ಸಾಕಷ್ಟು ಮಂದಿಯನ್ನು ಸೆಳೆದಿದೆ ಎಂಬಿತ್ಯಾದಿ ವಿಷಯಗಳನ್ನು ಗಣ್ಯರಿಗೆ ವಿವರಿಸಿದರು.

ನಗರಪಾಲಿಕೆಯ ಆಡಳಿತದ ಬಗ್ಗೆ ವಿವರಿಸಿದ ಹೆಚ್ಚುವರಿ ಆಯುಕ್ತರಾದ ಸವಿತಾ ಅವರು, ಮೈಸೂರು ಸ್ವಚ್ಛತೆಯಲ್ಲಿ ಈ ಬಾರಿ ದ್ವಿತೀಯ ಸ್ಥಾನವನ್ನು ಪಡೆದಿದೆ. ಮೈಸೂರು ೬೫ ವಾರ್ಡ್‌ಗಳನ್ನು ಹೊಂದಿದ್ದು, ಜನಪ್ರತಿನಿಧಿಗಳ ಸಹಕಾರ ಇನ್ನಿತರೆ ವಿಚಾರಗಳನ್ನು ತಿಳಿಸಿದರು.

ಪರಿಸರ ಇಂಜಿನಿುಂರ್ ಮೈತ್ರಿ ಅವರು ಮೈಸೂರಿನ ೬೫ ವಾರ್ಡ್‌ಗಳಲ್ಲಿ ಉತ್ಪತ್ತಿಯಾಗುವ ತಾಜ್ಯವನ್ನು ಹೇಗೆ ಸಮರ್ಥವಾಗಿ ವಿಲೇವಾರಿ ಮಾಡಲಾಗುತ್ತಿದೆ. ಪ್ರತಿದಿನ ಎಷ್ಟು ತಾಜ್ಯ ಉತ್ಪತ್ತಿಯಾಗುತ್ತಿದೆ. ಪೌರಕಾರ್ಮಿಕರ ಪಾತ್ರವೇನು? ಎಂಬುದನ್ನು ಪ್ರಾತ್ಯಕ್ಷಿಕೆಯ ಸಮೇತ ವಿವರಿಸಿದರು.

ಕಂದಾಯ ಅಧಿಕಾರಿ ದಾಸೇಗೌಡ ಅವರು, ಮೈಸೂರು ನಗರದಾದ್ಯಂತ ಆಸ್ತಿ ತೆರಿಗೆುಂನ್ನು ಸಂಗ್ರಹಿಸುವ ಬಗೆ, ಕಂದಾಯ ನಿಗದಿಗೆ ಮಾನದಂಡ, ಆನ್‌ಲೈನ್ ಮೂಲಕ ಕಂದಾಯ ಪಾವತಿಸಿಕೊಳ್ಳುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದರು.

ನಗರಪಾಲಿಕೆಗೆ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ ನಗರಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಕೆ ಮಾಡಲಾಗಿದೆ. ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಉಳಿತಾಯವಾಗಿದೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.

ಸಭೆಯಲ್ಲಿ ಹಾಜರಿದ್ದ ವಿವಿಧ ದೇಶಗಳ ಪ್ರತಿನಿಧಿಗಳು, ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿ ಬಗ್ಗೆ ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಅನುವಾನಗಳನ್ನು ಪರಿಹರಿಸಿಕೊಂಡರು. ನಂತರ ಅರಮನೆ ಹಾಗೂ ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್ಸಾದರು. ಹೆಚ್ಚುವರಿ ಆಯುಕ್ತ ಜಿ.ಸೋಮಶೇಖರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ಹೈದರಾಬಾದ್‌ನಲ್ಲಿರುವ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರತಿವರ್ಷ ವಿವಿಧ ದೇಶಗಳ ಪ್ರತಿನಿಧಿಗಳನ್ನು ಭಾರತಕ್ಕೆ ಆಹ್ವಾನಿಸಿ ಇಲ್ಲಿನ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡುತ್ತದೆ. ಅದರಂತೆ ಈ ಬಾರಿ ೨೨ ಮಂದಿ ರಾಷ್ಟ್ರಮಟ್ಟದ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದ್ದು, ಪ್ರತಿನಿಧಿಗಳು ಮೈಸೂರು, ಬೆಂಗಳೂರು, ರಾಮನಗರ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ.

andolana

Recent Posts

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

20 mins ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

45 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

2 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago