ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ.
ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು ಆಟೋ ಚಾಲಕರೊಬ್ಬರು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ ಇದನ್ನು ಕಂಡ ಸಾರ್ವಜನಿಕರು ಭಯಬೀತರಾಗಿದ್ದಾರೆ. ಆಟೋ ಚಾಲಕ ತನ್ನ ಮೊಬೈಲ್ ನಲ್ಲಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.
ಜಯ ಕರ್ನಾಟಕ ಹೋಬಳಿ ಘಟಕದ ಅಧ್ಯಕ್ಷ ಕಾಶಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹುಲಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ಭಯಗೊಂಡಿದ್ದಾರೆ. ಈಚೆಗೆ ಬಳ್ಳೂರುಹುಂಡಿ ಗ್ರಾಮದ ರೈತರೊಬ್ಬರ ಮೇಲೆ ಹುಲಿ ದಾಳಿ ವಾಡಿತ್ತು. ಆದರೂ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹುಲಿ ಸೆರೆಗೆ ಬಿದ್ದಿಲ್ಲ. ಹುಲ್ಲಹಳ್ಳಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿ ರೈತರು ಸಾಕಿದ ಪ್ರಾಣಿಗಳನ್ನು ಕೊಂದುಹಾಕುತ್ತಿದ್ದರೂ ಅರಣ್ಯ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಹಲವು ಬಾರಿ ವಿಷಯ ಮುಟ್ಟಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಹುಲಿ, ಚಿರತೆ ಹಾಗೂ ಕಾಡಾನೆಗಳ ಹಾವಳಿಯಿಂದ ರೈತರು ಕಂಗಾಲಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ಭಯಭೀತರಾಗಿದ್ದಾರೆ. ಇನ್ನಾದರೂ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…