ಜಿಲ್ಲೆಗಳು

ರಸ್ತೆಯಲ್ಲಿ ಕಾಣಿಸಿಕೊಂಡ ಹುಲಿ; ಗ್ರಾಮಸ್ಥರಲ್ಲಿ ಭೀತಿ

ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ.
ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು ಆಟೋ ಚಾಲಕರೊಬ್ಬರು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ ಇದನ್ನು ಕಂಡ ಸಾರ್ವಜನಿಕರು ಭಯಬೀತರಾಗಿದ್ದಾರೆ. ಆಟೋ ಚಾಲಕ ತನ್ನ ಮೊಬೈಲ್ ನಲ್ಲಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.
ಜಯ ಕರ್ನಾಟಕ ಹೋಬಳಿ ಘಟಕದ ಅಧ್ಯಕ್ಷ ಕಾಶಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹುಲಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ಭಯಗೊಂಡಿದ್ದಾರೆ. ಈಚೆಗೆ ಬಳ್ಳೂರುಹುಂಡಿ ಗ್ರಾಮದ ರೈತರೊಬ್ಬರ ಮೇಲೆ ಹುಲಿ ದಾಳಿ ವಾಡಿತ್ತು. ಆದರೂ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹುಲಿ ಸೆರೆಗೆ ಬಿದ್ದಿಲ್ಲ. ಹುಲ್ಲಹಳ್ಳಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿ ರೈತರು ಸಾಕಿದ ಪ್ರಾಣಿಗಳನ್ನು ಕೊಂದುಹಾಕುತ್ತಿದ್ದರೂ ಅರಣ್ಯ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಹಲವು ಬಾರಿ ವಿಷಯ ಮುಟ್ಟಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಹುಲಿ, ಚಿರತೆ ಹಾಗೂ ಕಾಡಾನೆಗಳ ಹಾವಳಿಯಿಂದ ರೈತರು ಕಂಗಾಲಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ಭಯಭೀತರಾಗಿದ್ದಾರೆ. ಇನ್ನಾದರೂ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

8 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

13 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago