ಜಿಲ್ಲೆಗಳು

ಕಾರ್ಮಿಕರನ್ನು ಕರೆದೊಯ್ಯುವ ವೇಳೆ ಕಳಚಿದ ಪಿಕಪ್‌ ವಾಹನದ ಚಕ್ರ

ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದಿಂದ ತೋಟದ ಮಾಲೀಕರೊಬ್ಬರು ಕೆಲಸಕ್ಕೆಂದು ಕಾರ್ಮಿಕರನ್ನು ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ವಾಹನದ ಆಕ್ಸಲ್ ತುಂಡಾದ ಪರಿಣಾಮ ಚಕ್ರಕಳಚಿಕೊಂಡು ಅವಘಡ ಸಂಭವಿಸಿದೆ. ವಾಹನದಲ್ಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ದೃಶ್ಯ ನಾಪೋಕ್ಲುವಿನ ಆಟೋ ಚಾಲಕರೊಬ್ಬರ ಮೊಬೈಲ್ ನಲ್ಲಿ ಸೆರೆಸಿಕ್ಕಿದೆ. ಇದರಲ್ಲಿ ಪಿಕ್ ಅಪ್ ವಾಹನದ ಚಕ್ರ ಕಳಚುವ ದೃಶ್ಯ ಸೆರೆಯಾಗಿದ್ದು ಭಯಾನಕವಾಗಿದೆ. ಸುಮಾರು 20.ಮೀ ನಷ್ಟು ದೂರ ಚಲಿಸಿದ ವಾಹನವನ್ನು ಪಲ್ಟಿಯಾಗದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ನಿಯಂತ್ರಿಸಿದ್ದಾನೆ.ಇದರಿಂದ ಭಾರಿ ಅನಾಹುತ ತಪ್ಪಿದಂತ್ತಾಗಿದೆ.ವಾಹನದಲ್ಲಿ ಸಣ್ಣಮಕ್ಕಳು ಸೇರಿದಂತೆ 15ಕ್ಕೂ ಅಧಿಕ ಕಾರ್ಮಿಕರಿದ್ದು ಅದೃಷ್ಟವಶಾತ್ ಎಲ್ಲಾರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಪೋಕ್ಲು ವ್ಯಾಪ್ತಿಯಲ್ಲಿ ಕಾಫಿ,ಕಾಳುಮೆಣಸು ಕೊಯ್ಲು ಕಾರ್ಯ ಬಿರುಸಿನಿಂದ ಸಾಗುತ್ತಿದ್ದು,ಇದಕ್ಕೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕಾರ್ಮಿಕರು ಆಗಮಿಸಿದ್ದು ತೋಟದ ಮಾಲೀಕರು, ಹಾಗೂ ಗೂಡ್ಸ್ ವಾಹನ ಸವಾರರು ತಮ್ಮ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೋಯುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಸಾಗಿಸುವುದು ಕಾನೂನು ಬಾಹಿರವಾಗಿದ್ದರು ನಿರಂತರವಾಗಿ ಇದು ನಡೆಯುತ್ತಿದೆ.ಗೂಡ್ಸ್ ವಾಹನದಲ್ಲಿ ಜನರನ್ನು ಕರೆದೊಯ್ಯುತ್ತಿರುವುದರಿಂದ ಇಂತಹ ಅನಾಹುತಗಳು ಸಂಭವಿಸುವಂತ್ತಾಗಿದೆ.ಈ ಹಿಂದೆ ಇದರ ಬಗ್ಗೆ ಪೋಲಿಸ್ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇನ್ನಾದರೂ ಪೊಲೀಸರುಎಚ್ಚೆತ್ತು ಕೊಂಡು ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

4 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

4 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

4 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

4 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

5 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

6 hours ago