ಜಿಲ್ಲೆಗಳು

ಕಾರ್ಮಿಕರನ್ನು ಕರೆದೊಯ್ಯುವ ವೇಳೆ ಕಳಚಿದ ಪಿಕಪ್‌ ವಾಹನದ ಚಕ್ರ

ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದಿಂದ ತೋಟದ ಮಾಲೀಕರೊಬ್ಬರು ಕೆಲಸಕ್ಕೆಂದು ಕಾರ್ಮಿಕರನ್ನು ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ವಾಹನದ ಆಕ್ಸಲ್ ತುಂಡಾದ ಪರಿಣಾಮ ಚಕ್ರಕಳಚಿಕೊಂಡು ಅವಘಡ ಸಂಭವಿಸಿದೆ. ವಾಹನದಲ್ಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ದೃಶ್ಯ ನಾಪೋಕ್ಲುವಿನ ಆಟೋ ಚಾಲಕರೊಬ್ಬರ ಮೊಬೈಲ್ ನಲ್ಲಿ ಸೆರೆಸಿಕ್ಕಿದೆ. ಇದರಲ್ಲಿ ಪಿಕ್ ಅಪ್ ವಾಹನದ ಚಕ್ರ ಕಳಚುವ ದೃಶ್ಯ ಸೆರೆಯಾಗಿದ್ದು ಭಯಾನಕವಾಗಿದೆ. ಸುಮಾರು 20.ಮೀ ನಷ್ಟು ದೂರ ಚಲಿಸಿದ ವಾಹನವನ್ನು ಪಲ್ಟಿಯಾಗದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ನಿಯಂತ್ರಿಸಿದ್ದಾನೆ.ಇದರಿಂದ ಭಾರಿ ಅನಾಹುತ ತಪ್ಪಿದಂತ್ತಾಗಿದೆ.ವಾಹನದಲ್ಲಿ ಸಣ್ಣಮಕ್ಕಳು ಸೇರಿದಂತೆ 15ಕ್ಕೂ ಅಧಿಕ ಕಾರ್ಮಿಕರಿದ್ದು ಅದೃಷ್ಟವಶಾತ್ ಎಲ್ಲಾರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಪೋಕ್ಲು ವ್ಯಾಪ್ತಿಯಲ್ಲಿ ಕಾಫಿ,ಕಾಳುಮೆಣಸು ಕೊಯ್ಲು ಕಾರ್ಯ ಬಿರುಸಿನಿಂದ ಸಾಗುತ್ತಿದ್ದು,ಇದಕ್ಕೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕಾರ್ಮಿಕರು ಆಗಮಿಸಿದ್ದು ತೋಟದ ಮಾಲೀಕರು, ಹಾಗೂ ಗೂಡ್ಸ್ ವಾಹನ ಸವಾರರು ತಮ್ಮ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೋಯುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಸಾಗಿಸುವುದು ಕಾನೂನು ಬಾಹಿರವಾಗಿದ್ದರು ನಿರಂತರವಾಗಿ ಇದು ನಡೆಯುತ್ತಿದೆ.ಗೂಡ್ಸ್ ವಾಹನದಲ್ಲಿ ಜನರನ್ನು ಕರೆದೊಯ್ಯುತ್ತಿರುವುದರಿಂದ ಇಂತಹ ಅನಾಹುತಗಳು ಸಂಭವಿಸುವಂತ್ತಾಗಿದೆ.ಈ ಹಿಂದೆ ಇದರ ಬಗ್ಗೆ ಪೋಲಿಸ್ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇನ್ನಾದರೂ ಪೊಲೀಸರುಎಚ್ಚೆತ್ತು ಕೊಂಡು ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

andolanait

Recent Posts

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

27 mins ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

2 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

4 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

7 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

7 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

8 hours ago