ಜಿಲ್ಲೆಗಳು

ಕಾರ್ಮಿಕರನ್ನು ಕರೆದೊಯ್ಯುವ ವೇಳೆ ಕಳಚಿದ ಪಿಕಪ್‌ ವಾಹನದ ಚಕ್ರ

ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದಿಂದ ತೋಟದ ಮಾಲೀಕರೊಬ್ಬರು ಕೆಲಸಕ್ಕೆಂದು ಕಾರ್ಮಿಕರನ್ನು ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ವಾಹನದ ಆಕ್ಸಲ್ ತುಂಡಾದ ಪರಿಣಾಮ ಚಕ್ರಕಳಚಿಕೊಂಡು ಅವಘಡ ಸಂಭವಿಸಿದೆ. ವಾಹನದಲ್ಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ದೃಶ್ಯ ನಾಪೋಕ್ಲುವಿನ ಆಟೋ ಚಾಲಕರೊಬ್ಬರ ಮೊಬೈಲ್ ನಲ್ಲಿ ಸೆರೆಸಿಕ್ಕಿದೆ. ಇದರಲ್ಲಿ ಪಿಕ್ ಅಪ್ ವಾಹನದ ಚಕ್ರ ಕಳಚುವ ದೃಶ್ಯ ಸೆರೆಯಾಗಿದ್ದು ಭಯಾನಕವಾಗಿದೆ. ಸುಮಾರು 20.ಮೀ ನಷ್ಟು ದೂರ ಚಲಿಸಿದ ವಾಹನವನ್ನು ಪಲ್ಟಿಯಾಗದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ನಿಯಂತ್ರಿಸಿದ್ದಾನೆ.ಇದರಿಂದ ಭಾರಿ ಅನಾಹುತ ತಪ್ಪಿದಂತ್ತಾಗಿದೆ.ವಾಹನದಲ್ಲಿ ಸಣ್ಣಮಕ್ಕಳು ಸೇರಿದಂತೆ 15ಕ್ಕೂ ಅಧಿಕ ಕಾರ್ಮಿಕರಿದ್ದು ಅದೃಷ್ಟವಶಾತ್ ಎಲ್ಲಾರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಪೋಕ್ಲು ವ್ಯಾಪ್ತಿಯಲ್ಲಿ ಕಾಫಿ,ಕಾಳುಮೆಣಸು ಕೊಯ್ಲು ಕಾರ್ಯ ಬಿರುಸಿನಿಂದ ಸಾಗುತ್ತಿದ್ದು,ಇದಕ್ಕೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕಾರ್ಮಿಕರು ಆಗಮಿಸಿದ್ದು ತೋಟದ ಮಾಲೀಕರು, ಹಾಗೂ ಗೂಡ್ಸ್ ವಾಹನ ಸವಾರರು ತಮ್ಮ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೋಯುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಸಾಗಿಸುವುದು ಕಾನೂನು ಬಾಹಿರವಾಗಿದ್ದರು ನಿರಂತರವಾಗಿ ಇದು ನಡೆಯುತ್ತಿದೆ.ಗೂಡ್ಸ್ ವಾಹನದಲ್ಲಿ ಜನರನ್ನು ಕರೆದೊಯ್ಯುತ್ತಿರುವುದರಿಂದ ಇಂತಹ ಅನಾಹುತಗಳು ಸಂಭವಿಸುವಂತ್ತಾಗಿದೆ.ಈ ಹಿಂದೆ ಇದರ ಬಗ್ಗೆ ಪೋಲಿಸ್ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇನ್ನಾದರೂ ಪೊಲೀಸರುಎಚ್ಚೆತ್ತು ಕೊಂಡು ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

1 hour ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago