ಮೈಸೂರು: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಸ್ಟಾಫ್ ನರ್ಸ್ ಓರ್ವರ ಮೇಲೆ ಯುವಕನೋರ್ವ ಚಾಮುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೆಬ್ಬಾಳಿನಲ್ಲಿರುವ ಭಾರತ್ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕು ಯಳಂದೂರು ನಿವಾಸಿ ನಂಜುಂಡಸ್ವಾಮಿ ಎಂಬಾತನೇ ಶ್ರುಶ್ರೂಷಕಿ ಹಾಗೂ ಆಕೆಯ ಸಹೋದ್ಯೋಗಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಜೈಲು ಸೇರಿದ್ದಾನೆ.
ನಗರದ ಹೆಬ್ಬಾಳ್ ಬಡಾವಣೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶುಶ್ರೂಷಕಿ ಹಾಗೂ ಆಸ್ಪತ್ರೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜುಂಡಸ್ವಾಮಿ ನಡುವೆ ಸ್ನೇಹವಿತ್ತು.
ಆಕೆಯೊಂದಿಗೆ ಸಲುಗೆಯಿಂದಿದ್ದ ನಂಜುಂಡಸ್ವಾಮಿ, ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ಆತನ ಮನವಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಆಕೆಯ ಮೇಲೆ ದ್ವೇಷ ಸಾಧಿಸುತ್ತಿದ್ದ ನಂಜುಂಡಸ್ವಾಮಿ ಆಕೆಯ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾನೆ.
ಅದರಂತೆ ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ನುಗ್ಗಿದ ನಂಜುಂಡಸ್ವಮಿ ಹಾಡು ಹಗಲೇ ಆಕೆಯ ಕುತ್ತಿಗೆ ಬಳಿ ಚಾಕುವಿನಿಂದ ಇರಿದಿದ್ದಾನೆ. ಗಯಾಳು ನೆರವಿಗೆ ಬಂದ ಮತ್ತೊಬ್ಬ ನರ್ಸ್ ಮೇಲೂ ದಾಳಿ ಮಾಡಿದ್ದಾನೆ ಎನ್ನಲಾಗಿದೆ.
ಕೂಡಲೇ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಇಬ್ಬರನ್ನೂ ರಕ್ಷಿಸಿದ್ದಾರೆ. ಸ್ಥಳಕ್ಕೆ ಬಂದ ಹೆಬ್ಬಾಳ್ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಶ್ರಶ್ರೂಷಕಿಯರಿಗೆ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ.





