ಮದ್ದೂರು: ತಂದೆಯೊಂದಿಗೆ ಮೀನು ಹಿಡಿಯಲು ತೆರಳಿದ್ದ ಪುತ್ರ ಶಿಂಷಾ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಪಟ್ಟಣದ ಕೊಲ್ಲಿ ವೃತ್ತದ ಶಿಂಷಾ ನದಿ ದಡದಲ್ಲಿ ಮೀನು ಹಿಡಿಯುತ್ತಿದ್ದ ಹೊಳೆಬೀದಿ ಹಳೇ ಮಸೀದಿ ರಸ್ತೆ ನಿವಾಸಿ ಅಹಮದ್ ಉಲ್ಲಾಖಾನ್ ಅವರ ಪುತ್ರ ಮುಹೀನ್ ಪಾಷಾ (೧೮) ಮೃತಪಟ್ಟ ಯುವಕ.
ಶಿಂಷಾ ನದಿಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಮೃತನ ಸಹಪಾಠಿ ನದಿಯಲ್ಲಿ ಈಜಾಡುತ್ತಿದ್ದಾಗ ತಾನು ಈಜಲು ಹೋದಾಗ ಕಾಲುಜಾರಿ ಬಿದ್ದು ನೀರಿನ ಸೆಳೆತಕ್ಕೆ ಸಿಲುಕಿ ತಂದೆ ಎದುರೇ ಕೊಚ್ಚಿ ಹೋಗಿದ್ದಾನೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಮೃತ ದೇಹ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು, ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…