ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗಪುರ ಗ್ರಾಮದ ೨೧ ವರ್ಷದ ಎಸ್.ಎ.ಸಚಿನ್ ಈಚೆಗೆ ಅಪಘಾತಕ್ಕೀಡಾಗಿ ಮೆದುಳಿನ ತೀವ್ರ ರಕ್ತಸ್ರಾವದಿಂದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ರೋಗಿಯ ಮೆದುಳು ನಿಷ್ಕ್ರೀಯ ಗೊಂಡಿರುವ ಬಗ್ಗೆ ಮತ್ತು ಬದುಕುಳಿಯುವ ಸಾಧ್ಯತೆ ಬಗ್ಗೆ ರೋಗಿಯ ಪೋಷಕರಿಗೆ ವಿವರಿಸಿದರು. ಹೀಗಾಗಿ ಅಂಗಾಂಗ ದಾನ ಪ್ರಕ್ರಿಯೆಗೆ ಯುವಕನ ಕುಟುಂಬಸ್ಥರು ಸಮ್ಮತಿ ಸೂಚಿಸಿದರು.
ವೈದ್ಯರ ತಂಡ ರೋಗಿಯ ಹೃದಯ, ಎರಡು ಕಾರ್ನಿಯ(ಕಣ್ಣುಗಳು), ಎರಡು ಕಿಡ್ನಿ ಮತ್ತು ಲಿವರ್ ಅನ್ನು ಅವಶ್ಯಕತೆಯಿದ್ದ ರೋಗಿಗಳಿಗೆ ನೀಡಿದರು. ಕಸಿ ವಾಡಲು ಹೃದಯವನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿ ಮತ್ತು ಲಿವರ್ ಅನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಗ್ರೀನ್ ಕಾರಿಡಾರ್ ಮುಖಾಂತರ ರವಾನಿಸಲಾಯಿತು. ಕಾರ್ನಿಯ(ಕಣ್ಣುಗಳು)ಗಳ ಅವಶ್ಯಕತೆ ಇದ್ದವರು ಈ ಸಂದರ್ಭದಲ್ಲಿ ಸಿಗದ ಕಾರಣ ಎರಡೂ ಕಾರ್ನಿಯ ಗಳನ್ನು ಬೆಂಗಳೂರಿನ ಲಯನ್ಸ್ ಆಸ್ಪತ್ರೆಗೆ ರವಾನಿಸಲಾಯಿತು.
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…