ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗಪುರ ಗ್ರಾಮದ ೨೧ ವರ್ಷದ ಎಸ್.ಎ.ಸಚಿನ್ ಈಚೆಗೆ ಅಪಘಾತಕ್ಕೀಡಾಗಿ ಮೆದುಳಿನ ತೀವ್ರ ರಕ್ತಸ್ರಾವದಿಂದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ರೋಗಿಯ ಮೆದುಳು ನಿಷ್ಕ್ರೀಯ ಗೊಂಡಿರುವ ಬಗ್ಗೆ ಮತ್ತು ಬದುಕುಳಿಯುವ ಸಾಧ್ಯತೆ ಬಗ್ಗೆ ರೋಗಿಯ ಪೋಷಕರಿಗೆ ವಿವರಿಸಿದರು. ಹೀಗಾಗಿ ಅಂಗಾಂಗ ದಾನ ಪ್ರಕ್ರಿಯೆಗೆ ಯುವಕನ ಕುಟುಂಬಸ್ಥರು ಸಮ್ಮತಿ ಸೂಚಿಸಿದರು.
ವೈದ್ಯರ ತಂಡ ರೋಗಿಯ ಹೃದಯ, ಎರಡು ಕಾರ್ನಿಯ(ಕಣ್ಣುಗಳು), ಎರಡು ಕಿಡ್ನಿ ಮತ್ತು ಲಿವರ್ ಅನ್ನು ಅವಶ್ಯಕತೆಯಿದ್ದ ರೋಗಿಗಳಿಗೆ ನೀಡಿದರು. ಕಸಿ ವಾಡಲು ಹೃದಯವನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿ ಮತ್ತು ಲಿವರ್ ಅನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಗ್ರೀನ್ ಕಾರಿಡಾರ್ ಮುಖಾಂತರ ರವಾನಿಸಲಾಯಿತು. ಕಾರ್ನಿಯ(ಕಣ್ಣುಗಳು)ಗಳ ಅವಶ್ಯಕತೆ ಇದ್ದವರು ಈ ಸಂದರ್ಭದಲ್ಲಿ ಸಿಗದ ಕಾರಣ ಎರಡೂ ಕಾರ್ನಿಯ ಗಳನ್ನು ಬೆಂಗಳೂರಿನ ಲಯನ್ಸ್ ಆಸ್ಪತ್ರೆಗೆ ರವಾನಿಸಲಾಯಿತು.
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…