ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗಪುರ ಗ್ರಾಮದ ೨೧ ವರ್ಷದ ಎಸ್.ಎ.ಸಚಿನ್ ಈಚೆಗೆ ಅಪಘಾತಕ್ಕೀಡಾಗಿ ಮೆದುಳಿನ ತೀವ್ರ ರಕ್ತಸ್ರಾವದಿಂದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ರೋಗಿಯ ಮೆದುಳು ನಿಷ್ಕ್ರೀಯ ಗೊಂಡಿರುವ ಬಗ್ಗೆ ಮತ್ತು ಬದುಕುಳಿಯುವ ಸಾಧ್ಯತೆ ಬಗ್ಗೆ ರೋಗಿಯ ಪೋಷಕರಿಗೆ ವಿವರಿಸಿದರು. ಹೀಗಾಗಿ ಅಂಗಾಂಗ ದಾನ ಪ್ರಕ್ರಿಯೆಗೆ ಯುವಕನ ಕುಟುಂಬಸ್ಥರು ಸಮ್ಮತಿ ಸೂಚಿಸಿದರು.
ವೈದ್ಯರ ತಂಡ ರೋಗಿಯ ಹೃದಯ, ಎರಡು ಕಾರ್ನಿಯ(ಕಣ್ಣುಗಳು), ಎರಡು ಕಿಡ್ನಿ ಮತ್ತು ಲಿವರ್ ಅನ್ನು ಅವಶ್ಯಕತೆಯಿದ್ದ ರೋಗಿಗಳಿಗೆ ನೀಡಿದರು. ಕಸಿ ವಾಡಲು ಹೃದಯವನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿ ಮತ್ತು ಲಿವರ್ ಅನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಗ್ರೀನ್ ಕಾರಿಡಾರ್ ಮುಖಾಂತರ ರವಾನಿಸಲಾಯಿತು. ಕಾರ್ನಿಯ(ಕಣ್ಣುಗಳು)ಗಳ ಅವಶ್ಯಕತೆ ಇದ್ದವರು ಈ ಸಂದರ್ಭದಲ್ಲಿ ಸಿಗದ ಕಾರಣ ಎರಡೂ ಕಾರ್ನಿಯ ಗಳನ್ನು ಬೆಂಗಳೂರಿನ ಲಯನ್ಸ್ ಆಸ್ಪತ್ರೆಗೆ ರವಾನಿಸಲಾಯಿತು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…