ಮೈಸೂರು: ಭೀಕರ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ವರ್ಗ ಸಾವಿನಲ್ಲಿಯೂ ಸಾರ್ಥಕ್ಯ ಮೆರೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸಿಂಗಪುರ ಗ್ರಾಮದ ೨೧ ವರ್ಷದ ಎಸ್.ಎ.ಸಚಿನ್ ಈಚೆಗೆ ಅಪಘಾತಕ್ಕೀಡಾಗಿ ಮೆದುಳಿನ ತೀವ್ರ ರಕ್ತಸ್ರಾವದಿಂದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ರೋಗಿಯ ಮೆದುಳು ನಿಷ್ಕ್ರೀಯ ಗೊಂಡಿರುವ ಬಗ್ಗೆ ಮತ್ತು ಬದುಕುಳಿಯುವ ಸಾಧ್ಯತೆ ಬಗ್ಗೆ ರೋಗಿಯ ಪೋಷಕರಿಗೆ ವಿವರಿಸಿದರು. ಹೀಗಾಗಿ ಅಂಗಾಂಗ ದಾನ ಪ್ರಕ್ರಿಯೆಗೆ ಯುವಕನ ಕುಟುಂಬಸ್ಥರು ಸಮ್ಮತಿ ಸೂಚಿಸಿದರು.
ವೈದ್ಯರ ತಂಡ ರೋಗಿಯ ಹೃದಯ, ಎರಡು ಕಾರ್ನಿಯ(ಕಣ್ಣುಗಳು), ಎರಡು ಕಿಡ್ನಿ ಮತ್ತು ಲಿವರ್ ಅನ್ನು ಅವಶ್ಯಕತೆಯಿದ್ದ ರೋಗಿಗಳಿಗೆ ನೀಡಿದರು. ಕಸಿ ವಾಡಲು ಹೃದಯವನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮತ್ತು ಒಂದು ಕಿಡ್ನಿ ಮತ್ತು ಲಿವರ್ ಅನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಗ್ರೀನ್ ಕಾರಿಡಾರ್ ಮುಖಾಂತರ ರವಾನಿಸಲಾಯಿತು. ಕಾರ್ನಿಯ(ಕಣ್ಣುಗಳು)ಗಳ ಅವಶ್ಯಕತೆ ಇದ್ದವರು ಈ ಸಂದರ್ಭದಲ್ಲಿ ಸಿಗದ ಕಾರಣ ಎರಡೂ ಕಾರ್ನಿಯ ಗಳನ್ನು ಬೆಂಗಳೂರಿನ ಲಯನ್ಸ್ ಆಸ್ಪತ್ರೆಗೆ ರವಾನಿಸಲಾಯಿತು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…