ಜಿಲ್ಲೆಗಳು

ವಿವಿಧ ಅಕಾಡೆಮಿಗಳ ಸದಸ್ಯರ ಬದಲಾವಣೆ

ಮೈಸೂರು: ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿ ಬರುವ ವಿವಿಧ ಅಕಾಡೆಮಿ ಹಾಗೂ ವಿವಿಧ ಪ್ರಾಧಿಕಾರಗಳ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕಾತಿ ಮಾಡಿದೆ. ಜತೆಗೆ ಹಳೆ ಸದಸ್ಯರನ್ನು ಕೈ ಬಿಟ್ಟು ಹೊಸಬರನ್ನು ನೇಮಿಸಿದೆ.

ಪರಿಷ್ಕೃತಿ ಪಟ್ಟಿಯಲ್ಲಿ ಮೈಸೂರು ಭಾಗದವರ ವಿವರ ಇಂತಿವೆ. ಕರ್ನಾಟಕ ಲಲಿತಾ ಅಕಾಡೆಮಿಗೆ ಅನೀತಾ ಫಾತೀಮಾ ಬದಲು ಮಡಿಕೇರಿ ರಾಮ ಗೌತಮ್, ಕರ್ನಾಟಕ ನಾಟಕ ಅಕಾಡೆಮಿಗೆ ಪ್ರೇಮ ಬಾದಾಮಿ ಬದಲು ಮೈಸೂರಿನ ಜೀವನ ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿಗೆ  ಚಾಮರಾಜನಗರದ ನರಸಿಂಹ ಮೂರ್ತಿ ಬದಲು ಬಳ್ಳಾರಿ ಶಿವೇಶ್ವರ ಗೌಡ , ಕರ್ನಾಟಕ ಕೊಡವ ಸಮಾಜಕ್ಕೆ  ಕೌಸಲ್ಯ ಸತೀಶ ಸೋಮಯಂಡ, ನಾಗೇಶ್ ಕಾಲುರೂ, ಪ್ರಮೀಳಾ ನಾಚಯ್ಯ, ಚಾಮನರ ದಿನೇಶ್ ಬೆಳ್ಳಿಯಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ ಮೈಸೂರಿನ ವಸಂತ ಭಾರದ್ವಾಜ್ ಕಬ್ಬಿನಾಲೆ ಅವರನ್ನು  ಕೈ ಬಿಟ್ಟು ಡಾ.ರಾಜೀವ ಲೋಚನ ಅವರನ್ನು ಸದಸ್ಯರಾಗಿ ನೇಮಿಸಿದೆ.

ರಂಗ ಸಮಾಜದ ಪೂರ್ತಿ ಬದಲು:

ರಂಗ ಸಮಾಜದ ಈ ಹಿಂದಿನಿ  ಸದಸ್ಯರಾದ ಸಿದ್ದರಾಮ ಹಿಪ್ಪರಗಿ, ಹಾಲಸ್ವಾಮಿ, ಮೈಸೂರಿನ ಡಾ.ಹೇಲನ್,  ಶ್ರೀಧರ್ ಹೆಗಡೆ, ಶಿವೇಶ್ವರ ಗೌಡ ಅವರನ್ನು ಕೈ ಬಿಟ್ಟು ಬದಲಾಗಿ ಡಾ. ಶಶಿಧರ್ ನರೇಂದ್ರ, ಡಾ.ಶೀನ ನಡೋಳಿ, ರಾಜಣ್ಣ ಜೀವರ್ಗಿ, ದಾಕ್ಷಾಯಿಣಿ ಭಟ್, ಡಾ.ಟಿ.ಆರ್.ಗುರುಪ್ರಸಾದ ಅವರನ್ನು ನೇಮಿಸಲಾಗಿದೆ.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

9 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago