ಚಾಮರಾಜನಗರ : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿದ್ದಯ್ಯನಪುರದಲ್ಲಿ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸಂಭ್ರಮ ಆಚರಿಸಿದರು.
ಗ್ರಾಮಸ್ಥರು ಗ್ರಾಮದ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ, ಅನ್ನ ಸಂತರ್ಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮುಖಂಡರಾದ ಚೆನ್ನಂಜಯ್ಯ ಅವರು ಮಾತನಾಡಿ, ಖರ್ಗೆ ಅವರು 1987 ರಲ್ಲಿ ಗ್ರಾಮಕ್ಕೆ ಆಗಮಿಸಿ 300 ಜನರಿಗೆ ಜಮೀನು ಸಾಗುವಳಿ ಪತ್ರ ವಿತರಿಸಿದ್ದರು. ಅಂದಿನ ಶಾಸಕ ಸಿದ್ದಯ್ಯ, ಎಂ.ಸಿ.ಬಸಪ್ಪ, ಬಿ.ರಾಚಯ್ಯ ಅವರು ಆಗಮಿಸಿದ್ದರು ಎಂದು ತಿಳಿಸಿದರು.
ಸತತವಾಗಿ ಶಾಸನ ಸಭೆ, ಸಂಸತ್ ಗೆ ಆಯ್ಕೆಯಾದರು. ಈಗ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…