ಜಿಲ್ಲೆಗಳು

ಟ್ಯಾಂಕರ್‌ ಡಿಕ್ಕಿಯಾಗಿ ಉರುಳಿಬಿದ್ದ ಶಾಲಾ ಬಸ್;‌ ಮಕ್ಕಳಿಗೆ ಗಾಯ

ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್‌ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ – ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್‌ ಬಳಿ ನಡೆದಿದೆ. ಈ ಬಸ್‌ ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ಗ್ರಾಮದ ಸಿಇಟಿ ಖಾಸಗಿ ಶಾಲೆಗೆ ಸೇರಿದ್ದು ಎನ್ನಲಾಗಿದೆ.

ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್ ಕುರುಬಹಳ್ಳಿ ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳನ್ನು ತುಂಬಿಕೊಂಡು ಮಿರ್ಲೆ ಗ್ರಾಮಕ್ಕೆ ಹೋಗುತ್ತಿದ್ದ ಮಿನಿ ಬಸ್‌ಗೆ ಬಳಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಿನಿ ಬಸ್‌ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಿಯರು ಹಾಗೂ ಸಾಲಿಗ್ರಾಮ ಪೊಲೀಸ್ ಠಾಣೆಯ ಪೊಲೀಸರು ಕರೆದೊಯ್ದಿದ್ದು, ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ದಾಖಲಾಗಿದೆ.

andolana

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

8 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

8 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

8 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

13 hours ago