ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ – ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಈ ಬಸ್ ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ಗ್ರಾಮದ ಸಿಇಟಿ ಖಾಸಗಿ ಶಾಲೆಗೆ ಸೇರಿದ್ದು ಎನ್ನಲಾಗಿದೆ.
ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್ ಕುರುಬಹಳ್ಳಿ ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳನ್ನು ತುಂಬಿಕೊಂಡು ಮಿರ್ಲೆ ಗ್ರಾಮಕ್ಕೆ ಹೋಗುತ್ತಿದ್ದ ಮಿನಿ ಬಸ್ಗೆ ಬಳಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಿನಿ ಬಸ್ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಿಯರು ಹಾಗೂ ಸಾಲಿಗ್ರಾಮ ಪೊಲೀಸ್ ಠಾಣೆಯ ಪೊಲೀಸರು ಕರೆದೊಯ್ದಿದ್ದು, ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ದಾಖಲಾಗಿದೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…