ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ – ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಈ ಬಸ್ ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ಗ್ರಾಮದ ಸಿಇಟಿ ಖಾಸಗಿ ಶಾಲೆಗೆ ಸೇರಿದ್ದು ಎನ್ನಲಾಗಿದೆ.
ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್ ಕುರುಬಹಳ್ಳಿ ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳನ್ನು ತುಂಬಿಕೊಂಡು ಮಿರ್ಲೆ ಗ್ರಾಮಕ್ಕೆ ಹೋಗುತ್ತಿದ್ದ ಮಿನಿ ಬಸ್ಗೆ ಬಳಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಿನಿ ಬಸ್ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಿಯರು ಹಾಗೂ ಸಾಲಿಗ್ರಾಮ ಪೊಲೀಸ್ ಠಾಣೆಯ ಪೊಲೀಸರು ಕರೆದೊಯ್ದಿದ್ದು, ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ದಾಖಲಾಗಿದೆ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…