ಜಿಲ್ಲೆಗಳು

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಎಲೆಕೆರೆ ಗ್ರಾಮದ ವ್ಯಕ್ತಿ ಚಂದ್ರಶೇಖರ್ ಅವರ ಪತ್ನಿ ಸುಮತಿ ಅವರಿಗೆ ವಿತರಣೆ ಮಾಡಿದರು.
ಎಸ್‌ಬಿಐನ ಪ್ರದೇಶಿಕ ಆಯುಕ್ತೆ ಎ.ಕೆ.ಸಂಧ್ಯಾ ಮಾತನಾಡಿ, ಭಾರತೀಯ ಸ್ಟೇಟ್‌ಬ್ಯಾಂಕ್ ವಿಮೆ ಕಂಪನಿಯೊಂದಿಗೆ ಗ್ರಾಹಕರಿಗೆ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರು ವಿಮೆ ಮಾಡಿದರೆ ಒಂದು ವೇಳೆ ಅಕಾಲಿಕ ಮರಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ವಿಮೆ ಹಣದ ಮೊತ್ತ ನೀಡಲಾಗುವುದು ಎಂದರು.
ಗ್ರಾಹಕರು ೧೦೦ ರೂ. ಪಾವತಿಸಿದರೆ ೨ ಲಕ್ಷ, ೫೦೦ ರೂ.ಪಾವತಿಸಿದರೆ ೧೦ ಲಕ್ಷ ಹಾಗೂ ೧೦೦೦ ರೂ. ವಿಮೆ ಹಣ ಪಾವತಿಸಿದರೆ ೨೦ ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಎಲೆಕೆರೆ ಗ್ರಾಮದ ಚಂದ್ರಶೇಖರ್ ಅವರು ೫೦೦ ವಿಮೆ ಪಾವತಿಸಿದ್ದರು ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ ೧೦ ಲಕ್ಷ ರೂ. ವಿಮೆ ಹಣ ನೀಡಲಾಗಿದೆ. ಹಾಗಾಗಿ ಎಸ್‌ಬಿಐನಲ್ಲಿ ಖಾತೆ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು ವಿಮೆ ಮಾಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ನಯನ ಮಾತನಾಡಿ, ಪ್ರತಿಯೊಬ್ಬರು ಗ್ರಾಹಕರು ಬ್ಯಾಂಕ್ ಅಧಿಕಾರಿಗಳ ಸಲಹೆಯಂತೆ ವಿಮೆ ಮಾಡಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ವೇಳೆ ಸಿಪಿಐ ವಿವೇಕಾನಂದ, ಶಾಖಾ ವ್ಯವಸ್ಥಾಪಕ ಎಂ.ಪ್ರಸಾದ್, ವಿರೋಪಾಕ್ಷ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago