ಜಿಲ್ಲೆಗಳು

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಎಲೆಕೆರೆ ಗ್ರಾಮದ ವ್ಯಕ್ತಿ ಚಂದ್ರಶೇಖರ್ ಅವರ ಪತ್ನಿ ಸುಮತಿ ಅವರಿಗೆ ವಿತರಣೆ ಮಾಡಿದರು.
ಎಸ್‌ಬಿಐನ ಪ್ರದೇಶಿಕ ಆಯುಕ್ತೆ ಎ.ಕೆ.ಸಂಧ್ಯಾ ಮಾತನಾಡಿ, ಭಾರತೀಯ ಸ್ಟೇಟ್‌ಬ್ಯಾಂಕ್ ವಿಮೆ ಕಂಪನಿಯೊಂದಿಗೆ ಗ್ರಾಹಕರಿಗೆ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರು ವಿಮೆ ಮಾಡಿದರೆ ಒಂದು ವೇಳೆ ಅಕಾಲಿಕ ಮರಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ವಿಮೆ ಹಣದ ಮೊತ್ತ ನೀಡಲಾಗುವುದು ಎಂದರು.
ಗ್ರಾಹಕರು ೧೦೦ ರೂ. ಪಾವತಿಸಿದರೆ ೨ ಲಕ್ಷ, ೫೦೦ ರೂ.ಪಾವತಿಸಿದರೆ ೧೦ ಲಕ್ಷ ಹಾಗೂ ೧೦೦೦ ರೂ. ವಿಮೆ ಹಣ ಪಾವತಿಸಿದರೆ ೨೦ ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಎಲೆಕೆರೆ ಗ್ರಾಮದ ಚಂದ್ರಶೇಖರ್ ಅವರು ೫೦೦ ವಿಮೆ ಪಾವತಿಸಿದ್ದರು ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ ೧೦ ಲಕ್ಷ ರೂ. ವಿಮೆ ಹಣ ನೀಡಲಾಗಿದೆ. ಹಾಗಾಗಿ ಎಸ್‌ಬಿಐನಲ್ಲಿ ಖಾತೆ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು ವಿಮೆ ಮಾಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ನಯನ ಮಾತನಾಡಿ, ಪ್ರತಿಯೊಬ್ಬರು ಗ್ರಾಹಕರು ಬ್ಯಾಂಕ್ ಅಧಿಕಾರಿಗಳ ಸಲಹೆಯಂತೆ ವಿಮೆ ಮಾಡಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ವೇಳೆ ಸಿಪಿಐ ವಿವೇಕಾನಂದ, ಶಾಖಾ ವ್ಯವಸ್ಥಾಪಕ ಎಂ.ಪ್ರಸಾದ್, ವಿರೋಪಾಕ್ಷ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

andolanait

Recent Posts

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

8 mins ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

2 hours ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

2 hours ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

3 hours ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

3 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

3 hours ago