ಜಿಲ್ಲೆಗಳು

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಎಲೆಕೆರೆ ಗ್ರಾಮದ ವ್ಯಕ್ತಿ ಚಂದ್ರಶೇಖರ್ ಅವರ ಪತ್ನಿ ಸುಮತಿ ಅವರಿಗೆ ವಿತರಣೆ ಮಾಡಿದರು.
ಎಸ್‌ಬಿಐನ ಪ್ರದೇಶಿಕ ಆಯುಕ್ತೆ ಎ.ಕೆ.ಸಂಧ್ಯಾ ಮಾತನಾಡಿ, ಭಾರತೀಯ ಸ್ಟೇಟ್‌ಬ್ಯಾಂಕ್ ವಿಮೆ ಕಂಪನಿಯೊಂದಿಗೆ ಗ್ರಾಹಕರಿಗೆ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರು ವಿಮೆ ಮಾಡಿದರೆ ಒಂದು ವೇಳೆ ಅಕಾಲಿಕ ಮರಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ವಿಮೆ ಹಣದ ಮೊತ್ತ ನೀಡಲಾಗುವುದು ಎಂದರು.
ಗ್ರಾಹಕರು ೧೦೦ ರೂ. ಪಾವತಿಸಿದರೆ ೨ ಲಕ್ಷ, ೫೦೦ ರೂ.ಪಾವತಿಸಿದರೆ ೧೦ ಲಕ್ಷ ಹಾಗೂ ೧೦೦೦ ರೂ. ವಿಮೆ ಹಣ ಪಾವತಿಸಿದರೆ ೨೦ ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಎಲೆಕೆರೆ ಗ್ರಾಮದ ಚಂದ್ರಶೇಖರ್ ಅವರು ೫೦೦ ವಿಮೆ ಪಾವತಿಸಿದ್ದರು ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ ೧೦ ಲಕ್ಷ ರೂ. ವಿಮೆ ಹಣ ನೀಡಲಾಗಿದೆ. ಹಾಗಾಗಿ ಎಸ್‌ಬಿಐನಲ್ಲಿ ಖಾತೆ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು ವಿಮೆ ಮಾಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ನಯನ ಮಾತನಾಡಿ, ಪ್ರತಿಯೊಬ್ಬರು ಗ್ರಾಹಕರು ಬ್ಯಾಂಕ್ ಅಧಿಕಾರಿಗಳ ಸಲಹೆಯಂತೆ ವಿಮೆ ಮಾಡಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ವೇಳೆ ಸಿಪಿಐ ವಿವೇಕಾನಂದ, ಶಾಖಾ ವ್ಯವಸ್ಥಾಪಕ ಎಂ.ಪ್ರಸಾದ್, ವಿರೋಪಾಕ್ಷ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

andolanait

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

3 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

3 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

4 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

4 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

4 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

5 hours ago