ಜಿಲ್ಲೆಗಳು

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಎಲೆಕೆರೆ ಗ್ರಾಮದ ವ್ಯಕ್ತಿ ಚಂದ್ರಶೇಖರ್ ಅವರ ಪತ್ನಿ ಸುಮತಿ ಅವರಿಗೆ ವಿತರಣೆ ಮಾಡಿದರು.
ಎಸ್‌ಬಿಐನ ಪ್ರದೇಶಿಕ ಆಯುಕ್ತೆ ಎ.ಕೆ.ಸಂಧ್ಯಾ ಮಾತನಾಡಿ, ಭಾರತೀಯ ಸ್ಟೇಟ್‌ಬ್ಯಾಂಕ್ ವಿಮೆ ಕಂಪನಿಯೊಂದಿಗೆ ಗ್ರಾಹಕರಿಗೆ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರು ವಿಮೆ ಮಾಡಿದರೆ ಒಂದು ವೇಳೆ ಅಕಾಲಿಕ ಮರಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ವಿಮೆ ಹಣದ ಮೊತ್ತ ನೀಡಲಾಗುವುದು ಎಂದರು.
ಗ್ರಾಹಕರು ೧೦೦ ರೂ. ಪಾವತಿಸಿದರೆ ೨ ಲಕ್ಷ, ೫೦೦ ರೂ.ಪಾವತಿಸಿದರೆ ೧೦ ಲಕ್ಷ ಹಾಗೂ ೧೦೦೦ ರೂ. ವಿಮೆ ಹಣ ಪಾವತಿಸಿದರೆ ೨೦ ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಎಲೆಕೆರೆ ಗ್ರಾಮದ ಚಂದ್ರಶೇಖರ್ ಅವರು ೫೦೦ ವಿಮೆ ಪಾವತಿಸಿದ್ದರು ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ ೧೦ ಲಕ್ಷ ರೂ. ವಿಮೆ ಹಣ ನೀಡಲಾಗಿದೆ. ಹಾಗಾಗಿ ಎಸ್‌ಬಿಐನಲ್ಲಿ ಖಾತೆ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು ವಿಮೆ ಮಾಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ನಯನ ಮಾತನಾಡಿ, ಪ್ರತಿಯೊಬ್ಬರು ಗ್ರಾಹಕರು ಬ್ಯಾಂಕ್ ಅಧಿಕಾರಿಗಳ ಸಲಹೆಯಂತೆ ವಿಮೆ ಮಾಡಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ವೇಳೆ ಸಿಪಿಐ ವಿವೇಕಾನಂದ, ಶಾಖಾ ವ್ಯವಸ್ಥಾಪಕ ಎಂ.ಪ್ರಸಾದ್, ವಿರೋಪಾಕ್ಷ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

10 hours ago