ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್ನ್ನು ವಿತರಣೆ ಮಾಡಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಎಲೆಕೆರೆ ಗ್ರಾಮದ ವ್ಯಕ್ತಿ ಚಂದ್ರಶೇಖರ್ ಅವರ ಪತ್ನಿ ಸುಮತಿ ಅವರಿಗೆ ವಿತರಣೆ ಮಾಡಿದರು.
ಎಸ್ಬಿಐನ ಪ್ರದೇಶಿಕ ಆಯುಕ್ತೆ ಎ.ಕೆ.ಸಂಧ್ಯಾ ಮಾತನಾಡಿ, ಭಾರತೀಯ ಸ್ಟೇಟ್ಬ್ಯಾಂಕ್ ವಿಮೆ ಕಂಪನಿಯೊಂದಿಗೆ ಗ್ರಾಹಕರಿಗೆ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಎಸ್ಬಿಐ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಗ್ರಾಹಕರು ವಿಮೆ ಮಾಡಿದರೆ ಒಂದು ವೇಳೆ ಅಕಾಲಿಕ ಮರಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ವಿಮೆ ಹಣದ ಮೊತ್ತ ನೀಡಲಾಗುವುದು ಎಂದರು.
ಗ್ರಾಹಕರು ೧೦೦ ರೂ. ಪಾವತಿಸಿದರೆ ೨ ಲಕ್ಷ, ೫೦೦ ರೂ.ಪಾವತಿಸಿದರೆ ೧೦ ಲಕ್ಷ ಹಾಗೂ ೧೦೦೦ ರೂ. ವಿಮೆ ಹಣ ಪಾವತಿಸಿದರೆ ೨೦ ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಎಲೆಕೆರೆ ಗ್ರಾಮದ ಚಂದ್ರಶೇಖರ್ ಅವರು ೫೦೦ ವಿಮೆ ಪಾವತಿಸಿದ್ದರು ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ ೧೦ ಲಕ್ಷ ರೂ. ವಿಮೆ ಹಣ ನೀಡಲಾಗಿದೆ. ಹಾಗಾಗಿ ಎಸ್ಬಿಐನಲ್ಲಿ ಖಾತೆ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು ವಿಮೆ ಮಾಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ನಯನ ಮಾತನಾಡಿ, ಪ್ರತಿಯೊಬ್ಬರು ಗ್ರಾಹಕರು ಬ್ಯಾಂಕ್ ಅಧಿಕಾರಿಗಳ ಸಲಹೆಯಂತೆ ವಿಮೆ ಮಾಡಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ವೇಳೆ ಸಿಪಿಐ ವಿವೇಕಾನಂದ, ಶಾಖಾ ವ್ಯವಸ್ಥಾಪಕ ಎಂ.ಪ್ರಸಾದ್, ವಿರೋಪಾಕ್ಷ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…