ಜಿಲ್ಲೆಗಳು

ತಿ.ನರಸೀಪುರ : ಟ್ರಾಕ್ಟರ್ ಮಗುಚಿ ಮೂವರು ಸಾವು

ತಿ.ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ಘಟನೆ

ತಿ.ನರಸೀಪುರ: ಹಲ್ಲಿನ ಜೋಳದ ಬಿಡಿಸುವ ಯಂತ್ರದ ಟ್ರಾಕ್ಟರ್ ಮಗುಚಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆರಗ್ಯಾತನಹಳ್ಳಿ ಸಮೀಪದಲ್ಲಿ ಶನಿವಾರ ನಡೆದಿದೆ.

ತಾಲ್ಲೂಕಿನ ಬೂದಹಳ್ಳಿ ಗ್ರಾಮದ ಲೇ. ಗವಿಸಿದ್ದಯ್ಯ ಅವರ ಮಗ ಮರಿಜೋಗಿ(೪೫), ಮಹದೇವ್ ಎಂಬವರ ಮಗ ಪ್ರಕಾಶ್ (೩೩) ಹಾಗೂ ನಾಗರಾಜು ಎಂಬವರ ಮಗ ಸಂತೋಷ್(೧೯) ಮೃತಪಟ್ಟವರು.

ಚಿಟಗಯ್ಯನಕೊಪ್ಪಲು ಗ್ರಾಮದಿಂದ ನೆರಗ್ಯಾತನಹಳ್ಳಿ ಹೋಗುವ ರಸ್ತೆಯಲ್ಲಿ ಹಲ್ಲಿನ ಜೋಳ ಬಿಡಿಸುವ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಅದರಲ್ಲಿ ಕುಳಿತಿದ್ದ ಈ ಮೂವರು ಮೃತಪಟ್ಟಿದ್ದಾರೆ.

ಎಸ್‌ಪಿ ಭೇಟಿ: ಸ್ಥಳಕ್ಕೆ ಎಸ್‌ಪಿ ಆರ್. ಚೇತನ್, ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಗೋವಿಂದರಾಜು ಹಾಗೂ ಇನ್‌ಸ್ಪೆಕ್ಟರ್ ಕೃಷ್ಣಪ್ಪ, ಅಪರಾಧ ವಿಭಾಗದ ಪಿಎಸ್‌ಐ ಪಚ್ಚೇಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

andolana

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

1 hour ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

2 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

2 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

3 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

3 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

3 hours ago