ತಿ.ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ಘಟನೆ
ತಿ.ನರಸೀಪುರ: ಹಲ್ಲಿನ ಜೋಳದ ಬಿಡಿಸುವ ಯಂತ್ರದ ಟ್ರಾಕ್ಟರ್ ಮಗುಚಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆರಗ್ಯಾತನಹಳ್ಳಿ ಸಮೀಪದಲ್ಲಿ ಶನಿವಾರ ನಡೆದಿದೆ.
ತಾಲ್ಲೂಕಿನ ಬೂದಹಳ್ಳಿ ಗ್ರಾಮದ ಲೇ. ಗವಿಸಿದ್ದಯ್ಯ ಅವರ ಮಗ ಮರಿಜೋಗಿ(೪೫), ಮಹದೇವ್ ಎಂಬವರ ಮಗ ಪ್ರಕಾಶ್ (೩೩) ಹಾಗೂ ನಾಗರಾಜು ಎಂಬವರ ಮಗ ಸಂತೋಷ್(೧೯) ಮೃತಪಟ್ಟವರು.
ಚಿಟಗಯ್ಯನಕೊಪ್ಪಲು ಗ್ರಾಮದಿಂದ ನೆರಗ್ಯಾತನಹಳ್ಳಿ ಹೋಗುವ ರಸ್ತೆಯಲ್ಲಿ ಹಲ್ಲಿನ ಜೋಳ ಬಿಡಿಸುವ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಅದರಲ್ಲಿ ಕುಳಿತಿದ್ದ ಈ ಮೂವರು ಮೃತಪಟ್ಟಿದ್ದಾರೆ.
ಎಸ್ಪಿ ಭೇಟಿ: ಸ್ಥಳಕ್ಕೆ ಎಸ್ಪಿ ಆರ್. ಚೇತನ್, ಎಎಸ್ಪಿ ನಂದಿನಿ, ಡಿವೈಎಸ್ಪಿ ಗೋವಿಂದರಾಜು ಹಾಗೂ ಇನ್ಸ್ಪೆಕ್ಟರ್ ಕೃಷ್ಣಪ್ಪ, ಅಪರಾಧ ವಿಭಾಗದ ಪಿಎಸ್ಐ ಪಚ್ಚೇಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…