ಜಿಲ್ಲೆಗಳು

ತಿ.ನರಸೀಪುರ : ಟ್ರಾಕ್ಟರ್ ಮಗುಚಿ ಮೂವರು ಸಾವು

ತಿ.ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ಘಟನೆ

ತಿ.ನರಸೀಪುರ: ಹಲ್ಲಿನ ಜೋಳದ ಬಿಡಿಸುವ ಯಂತ್ರದ ಟ್ರಾಕ್ಟರ್ ಮಗುಚಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆರಗ್ಯಾತನಹಳ್ಳಿ ಸಮೀಪದಲ್ಲಿ ಶನಿವಾರ ನಡೆದಿದೆ.

ತಾಲ್ಲೂಕಿನ ಬೂದಹಳ್ಳಿ ಗ್ರಾಮದ ಲೇ. ಗವಿಸಿದ್ದಯ್ಯ ಅವರ ಮಗ ಮರಿಜೋಗಿ(೪೫), ಮಹದೇವ್ ಎಂಬವರ ಮಗ ಪ್ರಕಾಶ್ (೩೩) ಹಾಗೂ ನಾಗರಾಜು ಎಂಬವರ ಮಗ ಸಂತೋಷ್(೧೯) ಮೃತಪಟ್ಟವರು.

ಚಿಟಗಯ್ಯನಕೊಪ್ಪಲು ಗ್ರಾಮದಿಂದ ನೆರಗ್ಯಾತನಹಳ್ಳಿ ಹೋಗುವ ರಸ್ತೆಯಲ್ಲಿ ಹಲ್ಲಿನ ಜೋಳ ಬಿಡಿಸುವ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಅದರಲ್ಲಿ ಕುಳಿತಿದ್ದ ಈ ಮೂವರು ಮೃತಪಟ್ಟಿದ್ದಾರೆ.

ಎಸ್‌ಪಿ ಭೇಟಿ: ಸ್ಥಳಕ್ಕೆ ಎಸ್‌ಪಿ ಆರ್. ಚೇತನ್, ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಗೋವಿಂದರಾಜು ಹಾಗೂ ಇನ್‌ಸ್ಪೆಕ್ಟರ್ ಕೃಷ್ಣಪ್ಪ, ಅಪರಾಧ ವಿಭಾಗದ ಪಿಎಸ್‌ಐ ಪಚ್ಚೇಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago