ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ,
ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ ಚಿರತೆ ಹಾಗೂ ಹುಲಿಗಳಿಂದ. ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ಅವರಿಗೂ ಸಂಬಂಧವಿಲ್ಲದಂತೆ ಕಾಲ ಹರಣ ಮಾಡುತ್ತಿದ್ದಾರೆ. ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಚರ್ಚಿಸಿ. ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು. ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚಿರುಕು ನೀಡದೇ ಮತ್ತಷ್ಟು ಜೀವಗಳ ಬಲಿಗೆ ಕಾಯುತ್ತಿದ್ದಾರಾ.? ಬಾಲಕರು ಮಹಿಳೆಯರು ರೈತರು ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸಂಜೆ 6.ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿ ಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ.
ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ. ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಿ. ಎಂದು ಕುರುಬುರು ಶಾಂತಕುಮಾರ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸುವ ಮೂಲಕ ಒತ್ತಾಯಿಸಿದ್ದಾರೆ.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…