ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ,
ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ ಚಿರತೆ ಹಾಗೂ ಹುಲಿಗಳಿಂದ. ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ಅವರಿಗೂ ಸಂಬಂಧವಿಲ್ಲದಂತೆ ಕಾಲ ಹರಣ ಮಾಡುತ್ತಿದ್ದಾರೆ. ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಚರ್ಚಿಸಿ. ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು. ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚಿರುಕು ನೀಡದೇ ಮತ್ತಷ್ಟು ಜೀವಗಳ ಬಲಿಗೆ ಕಾಯುತ್ತಿದ್ದಾರಾ.? ಬಾಲಕರು ಮಹಿಳೆಯರು ರೈತರು ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸಂಜೆ 6.ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿ ಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ.
ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ. ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಿ. ಎಂದು ಕುರುಬುರು ಶಾಂತಕುಮಾರ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸುವ ಮೂಲಕ ಒತ್ತಾಯಿಸಿದ್ದಾರೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…