ಜಿಲ್ಲೆಗಳು

ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಆರೋಪ : ಉಸ್ತುವಾರಿ ಸ್ಥಾನದಿಂದ ಎಸ್‌ಟಿಎಸ್‌ ರನ್ನು ಬದಲಾಯಿಸುವಂತೆ ಒತ್ತಾಯ

ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ,

ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ ಚಿರತೆ ಹಾಗೂ ಹುಲಿಗಳಿಂದ. ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ಅವರಿಗೂ ಸಂಬಂಧವಿಲ್ಲದಂತೆ ಕಾಲ ಹರಣ ಮಾಡುತ್ತಿದ್ದಾರೆ. ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಚರ್ಚಿಸಿ. ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು. ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚಿರುಕು ನೀಡದೇ ಮತ್ತಷ್ಟು ಜೀವಗಳ ಬಲಿಗೆ ಕಾಯುತ್ತಿದ್ದಾರಾ.? ಬಾಲಕರು ಮಹಿಳೆಯರು ರೈತರು ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸಂಜೆ 6.ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿ ಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ.

ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ. ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಿ. ಎಂದು  ಕುರುಬುರು ಶಾಂತಕುಮಾರ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸುವ ಮೂಲಕ ಒತ್ತಾಯಿಸಿದ್ದಾರೆ.

 

andolanait

Recent Posts

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

5 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

19 mins ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

28 mins ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

37 mins ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

51 mins ago

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

2 hours ago