ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ,
ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ ಚಿರತೆ ಹಾಗೂ ಹುಲಿಗಳಿಂದ. ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ಅವರಿಗೂ ಸಂಬಂಧವಿಲ್ಲದಂತೆ ಕಾಲ ಹರಣ ಮಾಡುತ್ತಿದ್ದಾರೆ. ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಚರ್ಚಿಸಿ. ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು. ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚಿರುಕು ನೀಡದೇ ಮತ್ತಷ್ಟು ಜೀವಗಳ ಬಲಿಗೆ ಕಾಯುತ್ತಿದ್ದಾರಾ.? ಬಾಲಕರು ಮಹಿಳೆಯರು ರೈತರು ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸಂಜೆ 6.ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿ ಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ.
ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ. ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಿ. ಎಂದು ಕುರುಬುರು ಶಾಂತಕುಮಾರ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸುವ ಮೂಲಕ ಒತ್ತಾಯಿಸಿದ್ದಾರೆ.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…