ಜಿಲ್ಲೆಗಳು

ಬಾಂಬ್ ಎಸೆಯುವ ಬಗ್ಗೆ ಮೊಬೈಲ್‌ನಲ್ಲಿ ಮಾತನಾಡಿದ ಆರೋಪ: ಇಬ್ಬರು ಪೊಲೀಸ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್‌ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು.
ಇಡೀ‌ ದೇಶವನ್ನೇ ಬೆಚ್ಚಿ ‌ಬೀಳಿಸುವ ಸ್ಫೋಟಕ ಆಡಿಯೋವನ್ನು ಮಡಿಕೇರಿ ನಿವಾಸಿ ಶೇಷಪ್ಪ ರೈರವರು ದಾಖಲೆ ಸಹಿತ ನಗರ ಪೊಲೀಸ್ ಠಾಣೆಗೆ ದೂರಿನ ಮೂಲಕ ನೀಡಿದ್ದಾರೆ‌. ಈ ಸಂಬಂಧ ಪೊಲಿಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಘಟನೆ ವಿವರ: 6 ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಮಲಯಾಳ ಭಾಷೆಯಲ್ಲಿ ೩ ನಿಮಿಷ ಮಾತನಾಡಿದ್ದಾರೆ. ಈ ಸಂದರ್ಭ ಹಿಂದೂಗಳು ಜಾಸ್ತಿ ಸೇರುವ ಜಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆಯಬೇಕು. ಹಿಂದೂ ನಾಯಿಗಳನ್ನು‌ ನಾವು ಸುಮ್ಮನೆ ಬಿಡಬಾರದು. ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಕೊಲ್ಲಬೇಕು. ಇಡೀ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಮಾಡ್ಬೇಕು. ನಾವು ಸತ್ತರೂ ಪರವಾಗಿಲ್ಲ ಹಿಂದೂಗಳನ್ನ ಬಿಡಬಾರದು. ಎಷ್ಟು ಹಣ ಬೇಕಾದರೂ ಖರ್ಚಾದರೂ ತೊಂದರೆ ಇಲ್ಲ. ನಾವೆಲ್ಲಾ ಸೇರಿ ಅದಕ್ಕೆ ಬೇಕಾಗುವ ಹಣ ಹೊಂದಿಸಬೇಕು ಎಂದು ಮಾತನಾಡಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿದೆ.

ಕೊಡಗಿನ 50ಕ್ಕೂ ಅಧಿಕ ಸ್ಥಳಗಳು ಟಾರ್ಗೆಟ್ ಮಾಡಲಾಗಿತ್ತು. ಜತಗೆ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಪ್ಲಾನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

andolana

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

29 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago