ಜಿಲ್ಲೆಗಳು

ಬಾಂಬ್ ಎಸೆಯುವ ಬಗ್ಗೆ ಮೊಬೈಲ್‌ನಲ್ಲಿ ಮಾತನಾಡಿದ ಆರೋಪ: ಇಬ್ಬರು ಪೊಲೀಸ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್‌ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು.
ಇಡೀ‌ ದೇಶವನ್ನೇ ಬೆಚ್ಚಿ ‌ಬೀಳಿಸುವ ಸ್ಫೋಟಕ ಆಡಿಯೋವನ್ನು ಮಡಿಕೇರಿ ನಿವಾಸಿ ಶೇಷಪ್ಪ ರೈರವರು ದಾಖಲೆ ಸಹಿತ ನಗರ ಪೊಲೀಸ್ ಠಾಣೆಗೆ ದೂರಿನ ಮೂಲಕ ನೀಡಿದ್ದಾರೆ‌. ಈ ಸಂಬಂಧ ಪೊಲಿಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಘಟನೆ ವಿವರ: 6 ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಮಲಯಾಳ ಭಾಷೆಯಲ್ಲಿ ೩ ನಿಮಿಷ ಮಾತನಾಡಿದ್ದಾರೆ. ಈ ಸಂದರ್ಭ ಹಿಂದೂಗಳು ಜಾಸ್ತಿ ಸೇರುವ ಜಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆಯಬೇಕು. ಹಿಂದೂ ನಾಯಿಗಳನ್ನು‌ ನಾವು ಸುಮ್ಮನೆ ಬಿಡಬಾರದು. ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಕೊಲ್ಲಬೇಕು. ಇಡೀ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಮಾಡ್ಬೇಕು. ನಾವು ಸತ್ತರೂ ಪರವಾಗಿಲ್ಲ ಹಿಂದೂಗಳನ್ನ ಬಿಡಬಾರದು. ಎಷ್ಟು ಹಣ ಬೇಕಾದರೂ ಖರ್ಚಾದರೂ ತೊಂದರೆ ಇಲ್ಲ. ನಾವೆಲ್ಲಾ ಸೇರಿ ಅದಕ್ಕೆ ಬೇಕಾಗುವ ಹಣ ಹೊಂದಿಸಬೇಕು ಎಂದು ಮಾತನಾಡಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿದೆ.

ಕೊಡಗಿನ 50ಕ್ಕೂ ಅಧಿಕ ಸ್ಥಳಗಳು ಟಾರ್ಗೆಟ್ ಮಾಡಲಾಗಿತ್ತು. ಜತಗೆ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಪ್ಲಾನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

andolana

Recent Posts

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

14 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

19 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago