ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು.
ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಸ್ಫೋಟಕ ಆಡಿಯೋವನ್ನು ಮಡಿಕೇರಿ ನಿವಾಸಿ ಶೇಷಪ್ಪ ರೈರವರು ದಾಖಲೆ ಸಹಿತ ನಗರ ಪೊಲೀಸ್ ಠಾಣೆಗೆ ದೂರಿನ ಮೂಲಕ ನೀಡಿದ್ದಾರೆ. ಈ ಸಂಬಂಧ ಪೊಲಿಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.
ಘಟನೆ ವಿವರ: 6 ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಮಲಯಾಳ ಭಾಷೆಯಲ್ಲಿ ೩ ನಿಮಿಷ ಮಾತನಾಡಿದ್ದಾರೆ. ಈ ಸಂದರ್ಭ ಹಿಂದೂಗಳು ಜಾಸ್ತಿ ಸೇರುವ ಜಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆಯಬೇಕು. ಹಿಂದೂ ನಾಯಿಗಳನ್ನು ನಾವು ಸುಮ್ಮನೆ ಬಿಡಬಾರದು. ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಕೊಲ್ಲಬೇಕು. ಇಡೀ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಮಾಡ್ಬೇಕು. ನಾವು ಸತ್ತರೂ ಪರವಾಗಿಲ್ಲ ಹಿಂದೂಗಳನ್ನ ಬಿಡಬಾರದು. ಎಷ್ಟು ಹಣ ಬೇಕಾದರೂ ಖರ್ಚಾದರೂ ತೊಂದರೆ ಇಲ್ಲ. ನಾವೆಲ್ಲಾ ಸೇರಿ ಅದಕ್ಕೆ ಬೇಕಾಗುವ ಹಣ ಹೊಂದಿಸಬೇಕು ಎಂದು ಮಾತನಾಡಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿದೆ.
ಕೊಡಗಿನ 50ಕ್ಕೂ ಅಧಿಕ ಸ್ಥಳಗಳು ಟಾರ್ಗೆಟ್ ಮಾಡಲಾಗಿತ್ತು. ಜತಗೆ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಪ್ಲಾನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…