ಜಿಲ್ಲೆಗಳು

ಬಾಂಬ್ ಎಸೆಯುವ ಬಗ್ಗೆ ಮೊಬೈಲ್‌ನಲ್ಲಿ ಮಾತನಾಡಿದ ಆರೋಪ: ಇಬ್ಬರು ಪೊಲೀಸ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್‌ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು.
ಇಡೀ‌ ದೇಶವನ್ನೇ ಬೆಚ್ಚಿ ‌ಬೀಳಿಸುವ ಸ್ಫೋಟಕ ಆಡಿಯೋವನ್ನು ಮಡಿಕೇರಿ ನಿವಾಸಿ ಶೇಷಪ್ಪ ರೈರವರು ದಾಖಲೆ ಸಹಿತ ನಗರ ಪೊಲೀಸ್ ಠಾಣೆಗೆ ದೂರಿನ ಮೂಲಕ ನೀಡಿದ್ದಾರೆ‌. ಈ ಸಂಬಂಧ ಪೊಲಿಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಘಟನೆ ವಿವರ: 6 ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಮಲಯಾಳ ಭಾಷೆಯಲ್ಲಿ ೩ ನಿಮಿಷ ಮಾತನಾಡಿದ್ದಾರೆ. ಈ ಸಂದರ್ಭ ಹಿಂದೂಗಳು ಜಾಸ್ತಿ ಸೇರುವ ಜಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆಯಬೇಕು. ಹಿಂದೂ ನಾಯಿಗಳನ್ನು‌ ನಾವು ಸುಮ್ಮನೆ ಬಿಡಬಾರದು. ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಕೊಲ್ಲಬೇಕು. ಇಡೀ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಮಾಡ್ಬೇಕು. ನಾವು ಸತ್ತರೂ ಪರವಾಗಿಲ್ಲ ಹಿಂದೂಗಳನ್ನ ಬಿಡಬಾರದು. ಎಷ್ಟು ಹಣ ಬೇಕಾದರೂ ಖರ್ಚಾದರೂ ತೊಂದರೆ ಇಲ್ಲ. ನಾವೆಲ್ಲಾ ಸೇರಿ ಅದಕ್ಕೆ ಬೇಕಾಗುವ ಹಣ ಹೊಂದಿಸಬೇಕು ಎಂದು ಮಾತನಾಡಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿದೆ.

ಕೊಡಗಿನ 50ಕ್ಕೂ ಅಧಿಕ ಸ್ಥಳಗಳು ಟಾರ್ಗೆಟ್ ಮಾಡಲಾಗಿತ್ತು. ಜತಗೆ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಪ್ಲಾನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago