ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು.
ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಸ್ಫೋಟಕ ಆಡಿಯೋವನ್ನು ಮಡಿಕೇರಿ ನಿವಾಸಿ ಶೇಷಪ್ಪ ರೈರವರು ದಾಖಲೆ ಸಹಿತ ನಗರ ಪೊಲೀಸ್ ಠಾಣೆಗೆ ದೂರಿನ ಮೂಲಕ ನೀಡಿದ್ದಾರೆ. ಈ ಸಂಬಂಧ ಪೊಲಿಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.
ಘಟನೆ ವಿವರ: 6 ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಮಲಯಾಳ ಭಾಷೆಯಲ್ಲಿ ೩ ನಿಮಿಷ ಮಾತನಾಡಿದ್ದಾರೆ. ಈ ಸಂದರ್ಭ ಹಿಂದೂಗಳು ಜಾಸ್ತಿ ಸೇರುವ ಜಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆಯಬೇಕು. ಹಿಂದೂ ನಾಯಿಗಳನ್ನು ನಾವು ಸುಮ್ಮನೆ ಬಿಡಬಾರದು. ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಕೊಲ್ಲಬೇಕು. ಇಡೀ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಮಾಡ್ಬೇಕು. ನಾವು ಸತ್ತರೂ ಪರವಾಗಿಲ್ಲ ಹಿಂದೂಗಳನ್ನ ಬಿಡಬಾರದು. ಎಷ್ಟು ಹಣ ಬೇಕಾದರೂ ಖರ್ಚಾದರೂ ತೊಂದರೆ ಇಲ್ಲ. ನಾವೆಲ್ಲಾ ಸೇರಿ ಅದಕ್ಕೆ ಬೇಕಾಗುವ ಹಣ ಹೊಂದಿಸಬೇಕು ಎಂದು ಮಾತನಾಡಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿದೆ.
ಕೊಡಗಿನ 50ಕ್ಕೂ ಅಧಿಕ ಸ್ಥಳಗಳು ಟಾರ್ಗೆಟ್ ಮಾಡಲಾಗಿತ್ತು. ಜತಗೆ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಪ್ಲಾನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…