ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದು, ಈ ನಾಟಕದ ಪ್ರದರ್ಶನ ಆರಂಭವಾದ ದಿನದಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರಿನ ಮಹೇಶಚಂದ್ರ ಗುರು ಎಂಬವವರು ವೀಡಿಯೋದಲ್ಲಿ ನಿಂದಿಸಿದ್ದಾರೆ. ಇದರಿಂದ ಪ್ರಚೋದನೆಗೊಂಡು ಕೆಲವರು ನನ್ನನ್ನು ನಿಂದಿಸಲು ತೊಡಗಿದ್ದಾರೆ.
ನ.೨೮ರಂದು ಶಿವಮೊಗ್ಗದ ಬ್ರಾಹ್ಮಣ ಬೀದಿ, ಶ್ರೀರಾಂ ಕೋಟ ರಸ್ತೆ ಎಂಬ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲಿ ‘ನೀವೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀರಾ. ನಿಮ್ಮನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ’ ಎಂದು ಜೀವ ಬೆದರಿಕೆ ಒಡ್ಡಲಾಗಿದೆ. ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರವೂ ಬಂದಿದ್ದು ಅದರಲ್ಲೂ ಬೆದರಿಕೆ ಹಾಕಲಾಗಿದೆ.
ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ಹೊರಗೆ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ, ಮಹೇಶ್ ಚಂದ್ರಗುರು ಅಂಥವರು ಮತ್ತು ಇತರ ಸಹಚರರು ಇಂತಹವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದ್ದರಿಂದ, ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…
ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…
ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…