ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದು, ಈ ನಾಟಕದ ಪ್ರದರ್ಶನ ಆರಂಭವಾದ ದಿನದಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರಿನ ಮಹೇಶಚಂದ್ರ ಗುರು ಎಂಬವವರು ವೀಡಿಯೋದಲ್ಲಿ ನಿಂದಿಸಿದ್ದಾರೆ. ಇದರಿಂದ ಪ್ರಚೋದನೆಗೊಂಡು ಕೆಲವರು ನನ್ನನ್ನು ನಿಂದಿಸಲು ತೊಡಗಿದ್ದಾರೆ.
ನ.೨೮ರಂದು ಶಿವಮೊಗ್ಗದ ಬ್ರಾಹ್ಮಣ ಬೀದಿ, ಶ್ರೀರಾಂ ಕೋಟ ರಸ್ತೆ ಎಂಬ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲಿ ‘ನೀವೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀರಾ. ನಿಮ್ಮನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ’ ಎಂದು ಜೀವ ಬೆದರಿಕೆ ಒಡ್ಡಲಾಗಿದೆ. ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರವೂ ಬಂದಿದ್ದು ಅದರಲ್ಲೂ ಬೆದರಿಕೆ ಹಾಕಲಾಗಿದೆ.
ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ಹೊರಗೆ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ, ಮಹೇಶ್ ಚಂದ್ರಗುರು ಅಂಥವರು ಮತ್ತು ಇತರ ಸಹಚರರು ಇಂತಹವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದ್ದರಿಂದ, ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…