ಜಿಲ್ಲೆಗಳು

ಕೊಲೆ ಬೆದರಿಕೆ ಆರೋಪ; ಅಡ್ಡಂಡ ಕಾರ್ಯಪ್ಪ ದೂರು

ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದು, ಈ ನಾಟಕದ ಪ್ರದರ್ಶನ ಆರಂಭವಾದ ದಿನದಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರಿನ ಮಹೇಶಚಂದ್ರ ಗುರು ಎಂಬವವರು ವೀಡಿಯೋದಲ್ಲಿ ನಿಂದಿಸಿದ್ದಾರೆ. ಇದರಿಂದ ಪ್ರಚೋದನೆಗೊಂಡು ಕೆಲವರು ನನ್ನನ್ನು ನಿಂದಿಸಲು ತೊಡಗಿದ್ದಾರೆ.

ನ.೨೮ರಂದು ಶಿವಮೊಗ್ಗದ ಬ್ರಾಹ್ಮಣ ಬೀದಿ, ಶ್ರೀರಾಂ ಕೋಟ ರಸ್ತೆ ಎಂಬ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲಿ ‘ನೀವೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀರಾ. ನಿಮ್ಮನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ’ ಎಂದು ಜೀವ ಬೆದರಿಕೆ ಒಡ್ಡಲಾಗಿದೆ. ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರವೂ ಬಂದಿದ್ದು ಅದರಲ್ಲೂ ಬೆದರಿಕೆ ಹಾಕಲಾಗಿದೆ.

ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ಹೊರಗೆ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ, ಮಹೇಶ್ ಚಂದ್ರಗುರು ಅಂಥವರು ಮತ್ತು ಇತರ ಸಹಚರರು ಇಂತಹವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದ್ದರಿಂದ, ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago