ಜಿಲ್ಲೆಗಳು

ಕೊಲೆ ಬೆದರಿಕೆ ಆರೋಪ; ಅಡ್ಡಂಡ ಕಾರ್ಯಪ್ಪ ದೂರು

ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ನಿರ್ದೇಶನ ಮಾಡಿದ್ದು, ಈ ನಾಟಕದ ಪ್ರದರ್ಶನ ಆರಂಭವಾದ ದಿನದಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರಿನ ಮಹೇಶಚಂದ್ರ ಗುರು ಎಂಬವವರು ವೀಡಿಯೋದಲ್ಲಿ ನಿಂದಿಸಿದ್ದಾರೆ. ಇದರಿಂದ ಪ್ರಚೋದನೆಗೊಂಡು ಕೆಲವರು ನನ್ನನ್ನು ನಿಂದಿಸಲು ತೊಡಗಿದ್ದಾರೆ.

ನ.೨೮ರಂದು ಶಿವಮೊಗ್ಗದ ಬ್ರಾಹ್ಮಣ ಬೀದಿ, ಶ್ರೀರಾಂ ಕೋಟ ರಸ್ತೆ ಎಂಬ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲಿ ‘ನೀವೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀರಾ. ನಿಮ್ಮನ್ನು ನೀವು ನಂಬಿರುವ ದೇವರು ಸಹ ಉಳಿಸುವುದಿಲ್ಲ’ ಎಂದು ಜೀವ ಬೆದರಿಕೆ ಒಡ್ಡಲಾಗಿದೆ. ಶಿವಮೊಗ್ಗದಿಂದ ಪೋಸ್ಟ್ ಕಾರ್ಡಿನಲ್ಲಿ ಇನ್ನೊಂದು ಪತ್ರವೂ ಬಂದಿದ್ದು ಅದರಲ್ಲೂ ಬೆದರಿಕೆ ಹಾಕಲಾಗಿದೆ.

ನಾನು ನನ್ನ ಕಚೇರಿಯ ಕೆಲಸಗಳು, ನಾಟಕದ ಸಂಘಟನಾತ್ಮಕ ಕೆಲಸಗಳಿಗಾಗಿ ಹೊರಗೆ ಹೋಗಬೇಕಾಗುತ್ತದೆ. ಈ ರೀತಿಯ ಬೆದರಿಕೆ ಕರೆ ಒಡ್ಡುವವರು ನನಗೆ ಜೀವಹಾನಿ ಮಾಡಬಹುದು ಎಂಬ ಅನುಮಾನ ಇದೆ. ಅಲ್ಲದೇ, ಮಹೇಶ್ ಚಂದ್ರಗುರು ಅಂಥವರು ಮತ್ತು ಇತರ ಸಹಚರರು ಇಂತಹವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದ್ದರಿಂದ, ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

20 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

21 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

24 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

28 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

32 mins ago