ಜಿಲ್ಲೆಗಳು

ವಿವಿಧ ಕ್ಷೇತ್ರದ ಸಾಧಕರಿಗೆ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ

ಮೈಸೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ಮೈಸೂರು ಕನ್ನಡ ವೇದಿಕೆ ವತಿಯಿಂದ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ಆಯೋಜಿಸಿದ್ದ ಸಮಾರಂಭವನ್ನು ಮೈಸೂರು ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಉದ್ಘಾಟಿಸಿದರು.
ಸಾಧಕರಾದ ಲೋಕೇಶ್ ಅಪ್ಪಣ್ಣ(ಕ್ರೀಡೆ), ಡಿ.ಆಯುಷ್ಮಾನ್(ನೃತ್ಯ), ಅಮಿತ್ ಗೌಡ(ನಟ), ಎಚ್.ಎಸ್.ರಾಕೇಶ್(ಸಂಗೀತ), ಡಾ.ರಾಮಸ್ವಾಮಿ(ರಂಗಕರ್ಮಿ), ಯುಕ್ತಿ ಕೃಷ್ಣೇಗೌಡ(ಕ್ರೀಡಾ ತರಬೇತುದಾರ), ಶ್ರೀಷಾ ಭಟ್(ಸಮಾಜ ಸೇವಕಿ), ನಿತಿನ್(ದೃಶ್ಯ ಮಾಧ್ಯಮ), ಪೃಥ್ವಿಸಿಂಗ್ ಚಂದಾವತ, ಮಹೇಂದ್ರ(ಸಮಾಜ ಸೇವಕ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ವೇಳೆ ಮಾತನಾಡಿದ ಮಹಾಪೌರ ಶಿವಕುಮಾರ್, ಕನ್ನಡದ ಶ್ರೇಷ್ಢ ಕವಿಗಳಲ್ಲಿ ದ.ರಾ.ಬೇಂದ್ರೆ ಅವರು ಒಬ್ಬರಾಗಿದ್ದರು. ಅಂತಹವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಮೈಸೂರು ಕನ್ನಡ ವೇದಿಕೆಯು ನಾಡು, ನುಡಿಯ ವಿಚಾರದಲ್ಲಿ ಹೋರಾಟ ಮಾಡುತ್ತಿರುವುದನ್ನು ಮೊದಲಿನಿಂದಲೂ ಗಮನಿಸಿದ್ದೇನೆ. ವೇದಿಕೆ ಮತ್ತಷ್ಟು ರಚನಾತ್ಮಕ, ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾವೇರಿ ಕನ್ನಿಕಾ ಎಜುಕೇಷನಲ್ ಸೊಸೈಟಿಯ ಎಂ.ಸಿ.ಚೌಂದಮ್ಮ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಗೋಪಿ, ಮಾಲಿನಿ, ಭವಾನಿ, ಶಶಿಕಲಾ, ಗೋವಿಂದರಾಜು, ಮಹದೇವ ಸ್ವಾಮಿ ಮತ್ತಿತರರು ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago