ಜಿಲ್ಲೆಗಳು

ವಿವಿಧ ಕ್ಷೇತ್ರದ ಸಾಧಕರಿಗೆ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ

ಮೈಸೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ಮೈಸೂರು ಕನ್ನಡ ವೇದಿಕೆ ವತಿಯಿಂದ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ಆಯೋಜಿಸಿದ್ದ ಸಮಾರಂಭವನ್ನು ಮೈಸೂರು ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಉದ್ಘಾಟಿಸಿದರು.
ಸಾಧಕರಾದ ಲೋಕೇಶ್ ಅಪ್ಪಣ್ಣ(ಕ್ರೀಡೆ), ಡಿ.ಆಯುಷ್ಮಾನ್(ನೃತ್ಯ), ಅಮಿತ್ ಗೌಡ(ನಟ), ಎಚ್.ಎಸ್.ರಾಕೇಶ್(ಸಂಗೀತ), ಡಾ.ರಾಮಸ್ವಾಮಿ(ರಂಗಕರ್ಮಿ), ಯುಕ್ತಿ ಕೃಷ್ಣೇಗೌಡ(ಕ್ರೀಡಾ ತರಬೇತುದಾರ), ಶ್ರೀಷಾ ಭಟ್(ಸಮಾಜ ಸೇವಕಿ), ನಿತಿನ್(ದೃಶ್ಯ ಮಾಧ್ಯಮ), ಪೃಥ್ವಿಸಿಂಗ್ ಚಂದಾವತ, ಮಹೇಂದ್ರ(ಸಮಾಜ ಸೇವಕ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ವೇಳೆ ಮಾತನಾಡಿದ ಮಹಾಪೌರ ಶಿವಕುಮಾರ್, ಕನ್ನಡದ ಶ್ರೇಷ್ಢ ಕವಿಗಳಲ್ಲಿ ದ.ರಾ.ಬೇಂದ್ರೆ ಅವರು ಒಬ್ಬರಾಗಿದ್ದರು. ಅಂತಹವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಮೈಸೂರು ಕನ್ನಡ ವೇದಿಕೆಯು ನಾಡು, ನುಡಿಯ ವಿಚಾರದಲ್ಲಿ ಹೋರಾಟ ಮಾಡುತ್ತಿರುವುದನ್ನು ಮೊದಲಿನಿಂದಲೂ ಗಮನಿಸಿದ್ದೇನೆ. ವೇದಿಕೆ ಮತ್ತಷ್ಟು ರಚನಾತ್ಮಕ, ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾವೇರಿ ಕನ್ನಿಕಾ ಎಜುಕೇಷನಲ್ ಸೊಸೈಟಿಯ ಎಂ.ಸಿ.ಚೌಂದಮ್ಮ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಗೋಪಿ, ಮಾಲಿನಿ, ಭವಾನಿ, ಶಶಿಕಲಾ, ಗೋವಿಂದರಾಜು, ಮಹದೇವ ಸ್ವಾಮಿ ಮತ್ತಿತರರು ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago