ಮೈಸೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ಮೈಸೂರು ಕನ್ನಡ ವೇದಿಕೆ ವತಿಯಿಂದ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ಆಯೋಜಿಸಿದ್ದ ಸಮಾರಂಭವನ್ನು ಮೈಸೂರು ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಉದ್ಘಾಟಿಸಿದರು.
ಸಾಧಕರಾದ ಲೋಕೇಶ್ ಅಪ್ಪಣ್ಣ(ಕ್ರೀಡೆ), ಡಿ.ಆಯುಷ್ಮಾನ್(ನೃತ್ಯ), ಅಮಿತ್ ಗೌಡ(ನಟ), ಎಚ್.ಎಸ್.ರಾಕೇಶ್(ಸಂಗೀತ), ಡಾ.ರಾಮಸ್ವಾಮಿ(ರಂಗಕರ್ಮಿ), ಯುಕ್ತಿ ಕೃಷ್ಣೇಗೌಡ(ಕ್ರೀಡಾ ತರಬೇತುದಾರ), ಶ್ರೀಷಾ ಭಟ್(ಸಮಾಜ ಸೇವಕಿ), ನಿತಿನ್(ದೃಶ್ಯ ಮಾಧ್ಯಮ), ಪೃಥ್ವಿಸಿಂಗ್ ಚಂದಾವತ, ಮಹೇಂದ್ರ(ಸಮಾಜ ಸೇವಕ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ವೇಳೆ ಮಾತನಾಡಿದ ಮಹಾಪೌರ ಶಿವಕುಮಾರ್, ಕನ್ನಡದ ಶ್ರೇಷ್ಢ ಕವಿಗಳಲ್ಲಿ ದ.ರಾ.ಬೇಂದ್ರೆ ಅವರು ಒಬ್ಬರಾಗಿದ್ದರು. ಅಂತಹವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ಮೈಸೂರು ಕನ್ನಡ ವೇದಿಕೆಯು ನಾಡು, ನುಡಿಯ ವಿಚಾರದಲ್ಲಿ ಹೋರಾಟ ಮಾಡುತ್ತಿರುವುದನ್ನು ಮೊದಲಿನಿಂದಲೂ ಗಮನಿಸಿದ್ದೇನೆ. ವೇದಿಕೆ ಮತ್ತಷ್ಟು ರಚನಾತ್ಮಕ, ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾವೇರಿ ಕನ್ನಿಕಾ ಎಜುಕೇಷನಲ್ ಸೊಸೈಟಿಯ ಎಂ.ಸಿ.ಚೌಂದಮ್ಮ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೇಸ್ ಬಾಬು, ಗೋಪಿ, ಮಾಲಿನಿ, ಭವಾನಿ, ಶಶಿಕಲಾ, ಗೋವಿಂದರಾಜು, ಮಹದೇವ ಸ್ವಾಮಿ ಮತ್ತಿತರರು ಹಾಜರಿದ್ದರು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…