ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ ಭರವಸೆ ನೀಡಿದರು.
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರಿಗೆ 2023 ನೂತನ ವರ್ಷದ ದಿನಚರಿಯನ್ನು ವಿತರಿಸಿ ಬಳಿಕ ಮಾತನಾಡಿದರು. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಹಿರಿದು , ಇಂತಹ ಕಾಯಕದಲ್ಲಿ ತೊಡಗಿರುವ ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘ, ದೇವಾಲಯಗಳ ಕಟ್ಟಡ ನಿರ್ಮಾಣ ಇನ್ನಿತರೆ ಕ್ಷೇತ್ರಗಳಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶೇ. ಇಂತಿಷ್ಟು ಅನುದಾನವನ್ನು ನೀಡುವ ಅವಕಾಶವಿದೆ.
ಈ ದಿಸೆಯಲ್ಲಿ ಪೂಜ್ಯಶ್ರೀಗಳ ಗಮನಕ್ಕೆ ತಂದು ಪತ್ರಕರ್ತರ ಭವನ ಕಟ್ಟಡಕ್ಕೆ ನಮ್ಮಿಂದಾದ ಸೇವೆಯನ್ನು ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶೇಖರ್, ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ಎಂ , ಪ್ರಧಾನ ಕಾರ್ಯದರ್ಶಿ ಕಣ್ಣೂರು ಬಸವರಾಜ್, ನಿರ್ದೇಶಕರಾದ ಸೋಮಶೇಖರ್, ಮಂಗಲ ಲಿಂಗರಾಜ್, ಮಧು ಅಜ್ಜಿಪುರ, ಸದಸ್ಯರುಗಳಾದ ಅಜ್ಜೀಪುರ ಸುರೇಶ್, ರವಿ, ಹನೂರು ರಾಜೇಶ್, ಪ್ರಭುಸ್ವಾಮಿ, ಬಂಡಳ್ಳಿ ಶಿವಕುಮಾರ್, ಹನೂರು ಮಂಜೇಶ್, ಮಾದೇವಸ್ವಾಮಿ, ರಮೇಶ್ ಗುಂಡಾಪುರ ಉಪಸ್ಥಿತರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…