ಜಿಲ್ಲೆಗಳು

ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲು ಕ್ರಮವಹಿಸಲಾಗುವುದು : ಪ್ರವೀಣ್ ಕುಮಾರ್

ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ ಭರವಸೆ ನೀಡಿದರು.

ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರಿಗೆ 2023 ನೂತನ ವರ್ಷದ ದಿನಚರಿಯನ್ನು ವಿತರಿಸಿ ಬಳಿಕ ಮಾತನಾಡಿದರು. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಹಿರಿದು , ಇಂತಹ ಕಾಯಕದಲ್ಲಿ ತೊಡಗಿರುವ ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘ, ದೇವಾಲಯಗಳ ಕಟ್ಟಡ ನಿರ್ಮಾಣ ಇನ್ನಿತರೆ ಕ್ಷೇತ್ರಗಳಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶೇ. ಇಂತಿಷ್ಟು ಅನುದಾನವನ್ನು ನೀಡುವ ಅವಕಾಶವಿದೆ.
ಈ ದಿಸೆಯಲ್ಲಿ ಪೂಜ್ಯಶ್ರೀಗಳ ಗಮನಕ್ಕೆ ತಂದು ಪತ್ರಕರ್ತರ ಭವನ ಕಟ್ಟಡಕ್ಕೆ ನಮ್ಮಿಂದಾದ ಸೇವೆಯನ್ನು ಒದಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶೇಖರ್, ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ಎಂ , ಪ್ರಧಾನ ಕಾರ್ಯದರ್ಶಿ ಕಣ್ಣೂರು ಬಸವರಾಜ್, ನಿರ್ದೇಶಕರಾದ ಸೋಮಶೇಖರ್, ಮಂಗಲ ಲಿಂಗರಾಜ್, ಮಧು ಅಜ್ಜಿಪುರ, ಸದಸ್ಯರುಗಳಾದ ಅಜ್ಜೀಪುರ ಸುರೇಶ್, ರವಿ, ಹನೂರು ರಾಜೇಶ್, ಪ್ರಭುಸ್ವಾಮಿ, ಬಂಡಳ್ಳಿ ಶಿವಕುಮಾರ್, ಹನೂರು ಮಂಜೇಶ್, ಮಾದೇವಸ್ವಾಮಿ, ರಮೇಶ್ ಗುಂಡಾಪುರ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago