ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭ, ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿ ಬಿಡುಗಡೆ, ಧರಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಪುಸ್ತಕ ಬಿಡುಗಡೆ ಹಾಗೂ ಕುಲಪತಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾಸಂಸ್ಥೆಗಳು ಯಾವಾಗಲೂ ಬೆಳಯುವಂತಹ ಸಂಸ್ಥೆಗಳು. ಆದ್ದರಿಂದಲೇ ಈ ಸ್ನಾತಕೋತ್ತರ ಕೇಂದ್ರಕ್ಕೆ ಇನ್ನೂ ಕೆಲವೇ ದಿನಗಳಲ್ಲಿ ವಿಜ್ಞಾನ ವಿಭಾಗ ಬರಲಿದೆ. ಈ ಭಾಗಕ್ಕೆ ಸರಿಹೊಂದುವAತಹ ಕೋರ್ಸ್ಗಳನ್ನು ತೆರೆದರೆ ಸೂಕ್ತ. ಈಗಿರುವ ಎಲ್ಲ ಕೋರ್ಸ್ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಉದ್ಘಾಟನೆ ನೆರವೇರಿಸಿದ ಮಳವಳ್ಳಿಯ ಕಪ್ಪಡಿ ಕ್ಷೇತ್ರದ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಮಾತನಾಡಿ, ಈ ಮಂಟೇಸ್ವಾಮಿ ಅಧ್ಯಯನ ಪೀಠವು ಮಂಟೇಸ್ವಾಮಿ ಕಾವ್ಯಗಳನ್ನು ಡಿಜಿಟಲೀಕರಣ ಮಾಡಿ ಎಲ್ಲೆಡೆ ಹರಡುವಂತೆ ಮಾಡಬೇಕು. ಇದಕ್ಕೆ ನಮ್ಮ ಮಠದ ಸಹಕಾರವನ್ನು ಸಹ ನೀಡುತ್ತೇವೆ ಎಂದು ತಿಳಿಸಿದರು. ಮಾನಸ ಗಂಗೋತ್ರಿಯ ಪ್ರಸಾರಾಂಗದ ನಿರ್ದೇಶಕ ಪ್ರೊ.ಎಂ.ನAಜಯ್ಯ ಹೊಂಗನೂರು ಮಾತನಾಡಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅನೇಕ ಪೀಠಗಳಿದ್ದರೂ ಸಹ ಮಂಟೇಸ್ವಾಮಿ ಪೀಠವು ಮಾತ್ರ ಸ್ಥಾಪನೆಗೊಂಡ ಒಂದೇ ವರ್ಷಕ್ಕೆ ಅತಿ ಹೆಚ್ಚು ಸಾಧನೆ ಮಾಡಿದೆ. ಅನೇಕ ಪುಸ್ತಕಗಳನ್ನು ಬಿಡುಗಡೆ ಮಾಡಿದೆ ಎಂದರು.
ಇದೇ ಸಂದರ್ಭದಲ್ಲಿ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭಕ್ಕೆ ಚಾಲನೆ ನೀಡಲಾಯಿತು. ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿಯನ್ನು ಬಿಡುಗಡೆ ಮಾಡಲಾಯಿತು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…