ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭ, ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿ ಬಿಡುಗಡೆ, ಧರಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಪುಸ್ತಕ ಬಿಡುಗಡೆ ಹಾಗೂ ಕುಲಪತಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾಸಂಸ್ಥೆಗಳು ಯಾವಾಗಲೂ ಬೆಳಯುವಂತಹ ಸಂಸ್ಥೆಗಳು. ಆದ್ದರಿಂದಲೇ ಈ ಸ್ನಾತಕೋತ್ತರ ಕೇಂದ್ರಕ್ಕೆ ಇನ್ನೂ ಕೆಲವೇ ದಿನಗಳಲ್ಲಿ ವಿಜ್ಞಾನ ವಿಭಾಗ ಬರಲಿದೆ. ಈ ಭಾಗಕ್ಕೆ ಸರಿಹೊಂದುವAತಹ ಕೋರ್ಸ್ಗಳನ್ನು ತೆರೆದರೆ ಸೂಕ್ತ. ಈಗಿರುವ ಎಲ್ಲ ಕೋರ್ಸ್ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಉದ್ಘಾಟನೆ ನೆರವೇರಿಸಿದ ಮಳವಳ್ಳಿಯ ಕಪ್ಪಡಿ ಕ್ಷೇತ್ರದ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಮಾತನಾಡಿ, ಈ ಮಂಟೇಸ್ವಾಮಿ ಅಧ್ಯಯನ ಪೀಠವು ಮಂಟೇಸ್ವಾಮಿ ಕಾವ್ಯಗಳನ್ನು ಡಿಜಿಟಲೀಕರಣ ಮಾಡಿ ಎಲ್ಲೆಡೆ ಹರಡುವಂತೆ ಮಾಡಬೇಕು. ಇದಕ್ಕೆ ನಮ್ಮ ಮಠದ ಸಹಕಾರವನ್ನು ಸಹ ನೀಡುತ್ತೇವೆ ಎಂದು ತಿಳಿಸಿದರು. ಮಾನಸ ಗಂಗೋತ್ರಿಯ ಪ್ರಸಾರಾಂಗದ ನಿರ್ದೇಶಕ ಪ್ರೊ.ಎಂ.ನAಜಯ್ಯ ಹೊಂಗನೂರು ಮಾತನಾಡಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅನೇಕ ಪೀಠಗಳಿದ್ದರೂ ಸಹ ಮಂಟೇಸ್ವಾಮಿ ಪೀಠವು ಮಾತ್ರ ಸ್ಥಾಪನೆಗೊಂಡ ಒಂದೇ ವರ್ಷಕ್ಕೆ ಅತಿ ಹೆಚ್ಚು ಸಾಧನೆ ಮಾಡಿದೆ. ಅನೇಕ ಪುಸ್ತಕಗಳನ್ನು ಬಿಡುಗಡೆ ಮಾಡಿದೆ ಎಂದರು.
ಇದೇ ಸಂದರ್ಭದಲ್ಲಿ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭಕ್ಕೆ ಚಾಲನೆ ನೀಡಲಾಯಿತು. ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿಯನ್ನು ಬಿಡುಗಡೆ ಮಾಡಲಾಯಿತು.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…