ಜಿಲ್ಲೆಗಳು

ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಮಂಟೇಸ್ವಾಮಿ ಪೀಠ : ಮೈವಿವಿ ಕುಲಪತಿ ಪ್ರೊ.ಹೇಮಂತಕುಮಾರ್ ಮೆಚ್ಚುಗೆ

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭ, ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿ ಬಿಡುಗಡೆ, ಧರಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಪುಸ್ತಕ ಬಿಡುಗಡೆ ಹಾಗೂ ಕುಲಪತಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾಸಂಸ್ಥೆಗಳು ಯಾವಾಗಲೂ ಬೆಳಯುವಂತಹ ಸಂಸ್ಥೆಗಳು. ಆದ್ದರಿಂದಲೇ ಈ ಸ್ನಾತಕೋತ್ತರ ಕೇಂದ್ರಕ್ಕೆ ಇನ್ನೂ ಕೆಲವೇ ದಿನಗಳಲ್ಲಿ ವಿಜ್ಞಾನ ವಿಭಾಗ ಬರಲಿದೆ. ಈ ಭಾಗಕ್ಕೆ ಸರಿಹೊಂದುವAತಹ ಕೋರ್ಸ್ಗಳನ್ನು ತೆರೆದರೆ ಸೂಕ್ತ. ಈಗಿರುವ ಎಲ್ಲ ಕೋರ್ಸ್ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಉದ್ಘಾಟನೆ ನೆರವೇರಿಸಿದ ಮಳವಳ್ಳಿಯ ಕಪ್ಪಡಿ ಕ್ಷೇತ್ರದ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಮಾತನಾಡಿ, ಈ ಮಂಟೇಸ್ವಾಮಿ ಅಧ್ಯಯನ ಪೀಠವು ಮಂಟೇಸ್ವಾಮಿ ಕಾವ್ಯಗಳನ್ನು ಡಿಜಿಟಲೀಕರಣ ಮಾಡಿ ಎಲ್ಲೆಡೆ ಹರಡುವಂತೆ ಮಾಡಬೇಕು. ಇದಕ್ಕೆ ನಮ್ಮ ಮಠದ ಸಹಕಾರವನ್ನು ಸಹ ನೀಡುತ್ತೇವೆ ಎಂದು ತಿಳಿಸಿದರು. ಮಾನಸ ಗಂಗೋತ್ರಿಯ ಪ್ರಸಾರಾಂಗದ ನಿರ್ದೇಶಕ ಪ್ರೊ.ಎಂ.ನAಜಯ್ಯ ಹೊಂಗನೂರು ಮಾತನಾಡಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅನೇಕ ಪೀಠಗಳಿದ್ದರೂ ಸಹ ಮಂಟೇಸ್ವಾಮಿ ಪೀಠವು ಮಾತ್ರ ಸ್ಥಾಪನೆಗೊಂಡ ಒಂದೇ ವರ್ಷಕ್ಕೆ ಅತಿ ಹೆಚ್ಚು ಸಾಧನೆ ಮಾಡಿದೆ. ಅನೇಕ ಪುಸ್ತಕಗಳನ್ನು ಬಿಡುಗಡೆ ಮಾಡಿದೆ ಎಂದರು.

ಇದೇ ಸಂದರ್ಭದಲ್ಲಿ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭಕ್ಕೆ ಚಾಲನೆ ನೀಡಲಾಯಿತು. ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿಯನ್ನು ಬಿಡುಗಡೆ ಮಾಡಲಾಯಿತು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago