ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭ, ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿ ಬಿಡುಗಡೆ, ಧರಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಪುಸ್ತಕ ಬಿಡುಗಡೆ ಹಾಗೂ ಕುಲಪತಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾಸಂಸ್ಥೆಗಳು ಯಾವಾಗಲೂ ಬೆಳಯುವಂತಹ ಸಂಸ್ಥೆಗಳು. ಆದ್ದರಿಂದಲೇ ಈ ಸ್ನಾತಕೋತ್ತರ ಕೇಂದ್ರಕ್ಕೆ ಇನ್ನೂ ಕೆಲವೇ ದಿನಗಳಲ್ಲಿ ವಿಜ್ಞಾನ ವಿಭಾಗ ಬರಲಿದೆ. ಈ ಭಾಗಕ್ಕೆ ಸರಿಹೊಂದುವAತಹ ಕೋರ್ಸ್ಗಳನ್ನು ತೆರೆದರೆ ಸೂಕ್ತ. ಈಗಿರುವ ಎಲ್ಲ ಕೋರ್ಸ್ಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಉದ್ಘಾಟನೆ ನೆರವೇರಿಸಿದ ಮಳವಳ್ಳಿಯ ಕಪ್ಪಡಿ ಕ್ಷೇತ್ರದ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಮಾತನಾಡಿ, ಈ ಮಂಟೇಸ್ವಾಮಿ ಅಧ್ಯಯನ ಪೀಠವು ಮಂಟೇಸ್ವಾಮಿ ಕಾವ್ಯಗಳನ್ನು ಡಿಜಿಟಲೀಕರಣ ಮಾಡಿ ಎಲ್ಲೆಡೆ ಹರಡುವಂತೆ ಮಾಡಬೇಕು. ಇದಕ್ಕೆ ನಮ್ಮ ಮಠದ ಸಹಕಾರವನ್ನು ಸಹ ನೀಡುತ್ತೇವೆ ಎಂದು ತಿಳಿಸಿದರು. ಮಾನಸ ಗಂಗೋತ್ರಿಯ ಪ್ರಸಾರಾಂಗದ ನಿರ್ದೇಶಕ ಪ್ರೊ.ಎಂ.ನAಜಯ್ಯ ಹೊಂಗನೂರು ಮಾತನಾಡಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅನೇಕ ಪೀಠಗಳಿದ್ದರೂ ಸಹ ಮಂಟೇಸ್ವಾಮಿ ಪೀಠವು ಮಾತ್ರ ಸ್ಥಾಪನೆಗೊಂಡ ಒಂದೇ ವರ್ಷಕ್ಕೆ ಅತಿ ಹೆಚ್ಚು ಸಾಧನೆ ಮಾಡಿದೆ. ಅನೇಕ ಪುಸ್ತಕಗಳನ್ನು ಬಿಡುಗಡೆ ಮಾಡಿದೆ ಎಂದರು.
ಇದೇ ಸಂದರ್ಭದಲ್ಲಿ ಕಬಿನಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಾರಂಭಕ್ಕೆ ಚಾಲನೆ ನೀಡಲಾಯಿತು. ಮಂಟೇಸ್ವಾಮಿ ಮಹಾಕಾವ್ಯದ ೨೦ ಗಂಟೆಗಳ ಶ್ರವ್ಯ ಮತ್ತು ದೃಶ್ಯ ಸರಣಿಯನ್ನು ಬಿಡುಗಡೆ ಮಾಡಲಾಯಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…