ಜಿಲ್ಲೆಗಳು

ನಟ ಚೇತನ್ ಹೇಳಿಕೆಗೆ ಖಂಡನೆ; ಮಡಿಕೇರಿಯಲ್ಲಿ ದೂರು ದಾಖಲಿಸಿದ ಯುವ ಸೇನೆ

ಮಡಿಕೇರಿ : ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ ದೂರು ದಾಖಲಿಸಿದೆ.

ಯುವಸೇನೆಯ ಜಿಲ್ಲಾ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಅವರು ಡಿವೈಎಸ್‌ಪಿ ಗೆ ದೂರು ಸಲ್ಲಿಸಿ ಚೇತನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ದೈವಾರಾಧನೆಯ ಕಥೆಯಾಧಾರಿತ ಕಾಂತಾರ ಚಿತ್ರ ಹಾದಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದೆ ಮತ್ತು ದೈವಶಕ್ತಿಯನ್ನು ಪ್ರತಿಬಿಂಬಿಸಿದೆ. ಚಿತ್ರ ಲಕ್ಷಾಂತರ ಭಕ್ತರ ಮನಸೂರೆಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಚೇತನ್ ದೈವಾರಾಧನೆಯ ಕುರಿತು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರವೀಣ್ ಅಸಮಾಧಾನ ವ್ಯಕ್ತಪಡಿಸಿದರು.
ಯವಸೇನೆಯ ಮುಖಂಡ ಕುಲ್ದೀಪ್ ಪೂಣಚ್ಚ ಕೂಡ ಚೇತನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago